ಚಿರತೆ ದಾಳಿಗೆ ನಾಯಿ ಬಲಿ: ಕೂದಲೆಳೆಯಲ್ಲಿ ಪಾರಾದ ರೈತ

ಚಿರತೆ ದಾಳಿಗೆ ನಾಯಿ ಬಲಿಯಾಗಿರುವ ಘಟನೆ ಇಂದು ಬೆಳಗ್ಗೆ ಸುಮಾರು 7 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಲಿಂಗದವೀರನಹಳ್ಳಿ ಸಮೀಪ ನಡೆದಿದೆ.

ಲಿಂಗದವೀರನಹಳ್ಳಿ ನಿವಾಸಿ ರೈತ ಕೆಂಪಯ್ಯನವರು ಬೆಳಗ್ಗೆ ಎಂದಿನಂತೆ ಊರ ಹೊರವಲಯದಲ್ಲಿರುವ ತಮ್ಮ ತೋಟಕ್ಕೆ ಬಂದಿದ್ದಾರೆ. ಕೆಂಪಯ್ಯನವರ ಜೊತೆ ನಾಯಿ ಕೂಡ ಬಂದಿದೆ. ನಾಯಿಯನ್ನು ಬೇಟೆಯಾಡಲು ಹೊಂಚುಹಾಕಿ ಪೊದೆಯಲ್ಲಿ ಅಡಗಿ ಕುಳಿತಿದ್ದ ಚಿರತೆ, ನಾಯಿ ಬಂದ ಕೂಡಲೇ ನಾಯಿ ಮೇಲೆ ಎರಗಿ ಬಗೆದು ತಿಂದಿದೆ. ಜೊತೆಯಲ್ಲಿ ಬಂದಿದ್ದ ನಾಯಿ ಕಾಣೆಯಾಗಿದ್ದನ್ನು ಗಮನಿಸಿದ ಕೆಂಪಯ್ಯ, ಸುತ್ತಾಮುತ್ತಾ ಹುಡುಕಿದ್ದಾರೆ. ಪೊದೆಯೊಂದರಲ್ಲಿ ನಾಯಿಯನ್ನು ಭಕ್ಷಿಸುತ್ತಿದ್ದ ಚಿರತೆ ಕೆಂಪಯ್ಯನವರನ್ನು ಕಂಡು ನಾಯಿಯನ್ನು ಅರೆಬರೆತಿಂದು ಅಲ್ಲಿಂದ ಪರಾರಿಯಾಗಿದೆ.

ಚಿರತೆ ಪರಾರಿಯಾಗುತ್ತಿರುವ ದೃಶ್ಯವನ್ನು ಕಂಪಯ್ಯನವರು ಕಣ್ಣಾರೇ ಕಂಡು ಗಾಬರಿಯಾಗಿ ಕೂಗಿಕೊಂಡಿದ್ದಾರೆ. ಅದೃಷ್ಟವಶಾತ್ ಕೆಂಪಯ್ಯನವರು ಚಿರತೆ ದಾಳಿಯಿಂದ ಪಾರಾಗಿದ್ದಾರೆ.

ಇತ್ತೀಚೆಗೆ ಇವರದ್ದೇ ನಾಯಿ ನಾಪತ್ತೆಯಾಗಿತ್ತು. ಆ ನಾಯಿಯೂ ಸಹ ಚಿರತೆ ದಾಳಿಗೆ ಬಲಿಯಾಗಿರಬಹುದು ಎಂದು ಊಹಿಸಲಾಗಿದೆ.

ಚಿರತೆಯನ್ನು ಕೂಡಲೇ ಸೆರೆ ಹಿಡಿದು ಜನ ಜಾನುವಾರುಗಳ ಪ್ರಾಣ ರಕ್ಷಣೆ ಮಾಡಬೇಕೆಂದು ಅರಣ್ಯ ಇಲಾಖೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದ್ದಾರೆ…

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

2 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

4 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

15 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

16 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago