ಚಿರತೆ ದಾಳಿಗೆ ಮತ್ತೊಂದು ಹಸು ಬಲಿ: ಚಿರತೆ ದಾಳಿಗೆ ಸುಮಾರು 30 ಸಾವಿರ ಬೆಲೆ ಬಾಳುವ ಹಸು ಸ್ಥಳದಲ್ಲೇ ಸಾವು: ತಾಲೂಕಿನ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಘಟನೆ

ಚಿರತೆ ದಾಳಿಗೆ ಸುಮಾರು 30 ಸಾವಿರ ಬೆಲೆ ಬಾಳುವ ಹಸು ಬಲಿಯಾಗಿರುವ ಘಟನೆ ತಾಲೂಕಿನ ಕೆಳಗಿನಜೂಗಾನಹಳ್ಳಿ ಗ್ರಾಮದ ಹೊರವಲಯದ ಕಾಡಿನಲ್ಲಿ ನಡೆದಿದೆ.

ಕೆಳಗಿನಜೂಗಾನಹಳ್ಳಿ ಗ್ರಾಮದ ನಿವಾಸಿ ರೈತ‌‌ ಮಹಿಳೆ ಗೌರಮ್ಮ ಎಂದಿನಂತೆ ತಮ್ಮ ಹಸುಗಳನ್ನು ಮೇಯಿಸಲು ಕಾಡಿಗೆ ಹೋಗಿದ್ದಾರೆ. ಮೇ.30 (ನಿನ್ನೆ) ಮಧ್ಯಾಹ್ನ 2 ಗಂಟೆ‌ ಸಮಯದಲ್ಲಿ ಪ್ರತಿದಿನ ನೀರು ಕುಡಿಸುವ ಜಾಗದಲ್ಲಿ ಚಿರತೆ ಏಕಾಏಕಿ ಹಸುವಿನ ಮೇಲೆ ಎರಗಿ ಗಾಯಪಡಿಸಿದೆ. ಗಾಯಪಡಿಸುವುದನ್ನು ಕಂಡ ಗೌರಮ್ಮ ತಮ್ಮ ಹಸುವನ್ನು ಕಾಪಾಡಲು ಜೋರಾಗಿ ಕೂಗಿಕೊಂಡಾಗ ಅಲ್ಲಿಂದ ಓಡಿಹೋಗಿರುವ ಚಿರತೆ.

ಚಿರತೆ ಇಲ್ಲದ ಸಮಯದಲ್ಲಿ ಬಂದು ನೋಡಿದಾಗ ಹಸು ಸ್ಥಳದಲ್ಲೇ ಪ್ರಾಣ ಬಿಟ್ಟಿರುವುದನ್ನು ಕಂಡಿದ್ದಾರೆ. ಹೇಗೋ ಪ್ರಾಣ ಹೋಗಿದೆ ಎಂದು ಸ್ಥಳದಲ್ಲೇ ಮೃತ ಹಸುವನ್ನು ಬಿಟ್ಟು‌ ಮಿಕ್ಕುಳಿದ ಹಸುಗಳನ್ನು ಮನೆಗೆ ಹೊಡೆದುಕೊಂಡು ಬಂದಿರುವ ಗೌರಮ್ಮ.

ಇಂದು (ಮೇ.31) ಅದೇ ಸ್ಥಳಕ್ಕೆ ಹೋಗಿ ನೋಡಿದಾಗ ಹಸುವನ್ನು ಪೂರ್ತಿಯಾಗಿ ತಿಂದು ತೇಗಿರುವ ಚಿರತೆ. ಸಾವಿರಾರು ರೂ. ಮೌಲ್ಯದ ಹಸುವನ್ನು ಕಳೆದುಕೊಂಡ ರೈತ ಮಹಿಳೆ ಗೌರಮ್ಮ ಸಂಕಷ್ಟದಲ್ಲಿದ್ದಾರೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇಂತಹದ್ದೇ ಘಟನೆ ಮೇ.29ರಂದು ತಾಲೂಕಿನ ತೂಬಗೆರೆ ಹೋಬಳಿಯ ಹಿರೇಮುದ್ದೇನಹಳ್ಳಿ ಗ್ರಾಮದಲ್ಲಿ ನಡೆದಿತ್ತು. ಈ ಘಟನೆ ಮಾಸುವ ಮೊದಲೇ ಮತ್ತೊಂದು ಘಟನೆ ಸಂಭವಿಸಿದೆ. ಪ್ರಾಣಿಗಳ ಮೇಲೆ ಚಿರತೆ ದಾಳಿ ಕಂಡು, ಕೇಳಿ ಭಯ ಭೀತರಾಗಿರುವ ಜನ.

ಚಿರತೆಯಿಂದ ಅದೃಷ್ಟವಶಾತ್ ಮನುಷ್ಯನಿಗೆ ಯಾವ ಹಾನಿಯಾಗಿಲ್ಲ. ಹಾನಿಯಾಗುವುದಕ್ಕೂ ಮುನ್ನ ಚಿರತೆಯನ್ನ ಸೆರೆಹಿಡಿದು ನೆಮ್ಮದಿ ಜೀವನ ನಡೆಸಲು ಅನುವುಮಾಡಿಕೊಡುವಂತೆ ಅರಣ್ಯ ಇಲಾಖೆಗೆ ಜನ ಮನವಿ ಮಾಡಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

3 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

4 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

9 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

11 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

13 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

15 hours ago