ಚಿರತೆ ದಾಳಿಗೆ ಸುಮಾರು 30 ಸಾವಿರ ಬೆಲೆ ಬಾಳುವ ಹಸು ಬಲಿಯಾಗಿರುವ ಘಟನೆ ತಾಲೂಕಿನ ಕೆಳಗಿನಜೂಗಾನಹಳ್ಳಿ ಗ್ರಾಮದ ಹೊರವಲಯದ ಕಾಡಿನಲ್ಲಿ ನಡೆದಿದೆ.
ಕೆಳಗಿನಜೂಗಾನಹಳ್ಳಿ ಗ್ರಾಮದ ನಿವಾಸಿ ರೈತ ಮಹಿಳೆ ಗೌರಮ್ಮ ಎಂದಿನಂತೆ ತಮ್ಮ ಹಸುಗಳನ್ನು ಮೇಯಿಸಲು ಕಾಡಿಗೆ ಹೋಗಿದ್ದಾರೆ. ಮೇ.30 (ನಿನ್ನೆ) ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಪ್ರತಿದಿನ ನೀರು ಕುಡಿಸುವ ಜಾಗದಲ್ಲಿ ಚಿರತೆ ಏಕಾಏಕಿ ಹಸುವಿನ ಮೇಲೆ ಎರಗಿ ಗಾಯಪಡಿಸಿದೆ. ಗಾಯಪಡಿಸುವುದನ್ನು ಕಂಡ ಗೌರಮ್ಮ ತಮ್ಮ ಹಸುವನ್ನು ಕಾಪಾಡಲು ಜೋರಾಗಿ ಕೂಗಿಕೊಂಡಾಗ ಅಲ್ಲಿಂದ ಓಡಿಹೋಗಿರುವ ಚಿರತೆ.
ಇಂದು (ಮೇ.31) ಅದೇ ಸ್ಥಳಕ್ಕೆ ಹೋಗಿ ನೋಡಿದಾಗ ಹಸುವನ್ನು ಪೂರ್ತಿಯಾಗಿ ತಿಂದು ತೇಗಿರುವ ಚಿರತೆ. ಸಾವಿರಾರು ರೂ. ಮೌಲ್ಯದ ಹಸುವನ್ನು ಕಳೆದುಕೊಂಡ ರೈತ ಮಹಿಳೆ ಗೌರಮ್ಮ ಸಂಕಷ್ಟದಲ್ಲಿದ್ದಾರೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಇಂತಹದ್ದೇ ಘಟನೆ ಮೇ.29ರಂದು ತಾಲೂಕಿನ ತೂಬಗೆರೆ ಹೋಬಳಿಯ ಹಿರೇಮುದ್ದೇನಹಳ್ಳಿ ಗ್ರಾಮದಲ್ಲಿ ನಡೆದಿತ್ತು. ಈ ಘಟನೆ ಮಾಸುವ ಮೊದಲೇ ಮತ್ತೊಂದು ಘಟನೆ ಸಂಭವಿಸಿದೆ. ಪ್ರಾಣಿಗಳ ಮೇಲೆ ಚಿರತೆ ದಾಳಿ ಕಂಡು, ಕೇಳಿ ಭಯ ಭೀತರಾಗಿರುವ ಜನ.
ಚಿರತೆಯಿಂದ ಅದೃಷ್ಟವಶಾತ್ ಮನುಷ್ಯನಿಗೆ ಯಾವ ಹಾನಿಯಾಗಿಲ್ಲ. ಹಾನಿಯಾಗುವುದಕ್ಕೂ ಮುನ್ನ ಚಿರತೆಯನ್ನ ಸೆರೆಹಿಡಿದು ನೆಮ್ಮದಿ ಜೀವನ ನಡೆಸಲು ಅನುವುಮಾಡಿಕೊಡುವಂತೆ ಅರಣ್ಯ ಇಲಾಖೆಗೆ ಜನ ಮನವಿ ಮಾಡಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…