ಚಿರತೆ ದಾಳಿಗೆ ಸುಮಾರು 30 ಸಾವಿರ ಬೆಲೆ ಬಾಳುವ ಹಸು ಬಲಿಯಾಗಿರುವ ಘಟನೆ ತಾಲೂಕಿನ ಕೆಳಗಿನಜೂಗಾನಹಳ್ಳಿ ಗ್ರಾಮದ ಹೊರವಲಯದ ಕಾಡಿನಲ್ಲಿ ನಡೆದಿದೆ.
ಕೆಳಗಿನಜೂಗಾನಹಳ್ಳಿ ಗ್ರಾಮದ ನಿವಾಸಿ ರೈತ ಮಹಿಳೆ ಗೌರಮ್ಮ ಎಂದಿನಂತೆ ತಮ್ಮ ಹಸುಗಳನ್ನು ಮೇಯಿಸಲು ಕಾಡಿಗೆ ಹೋಗಿದ್ದಾರೆ. ಮೇ.30 (ನಿನ್ನೆ) ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಪ್ರತಿದಿನ ನೀರು ಕುಡಿಸುವ ಜಾಗದಲ್ಲಿ ಚಿರತೆ ಏಕಾಏಕಿ ಹಸುವಿನ ಮೇಲೆ ಎರಗಿ ಗಾಯಪಡಿಸಿದೆ. ಗಾಯಪಡಿಸುವುದನ್ನು ಕಂಡ ಗೌರಮ್ಮ ತಮ್ಮ ಹಸುವನ್ನು ಕಾಪಾಡಲು ಜೋರಾಗಿ ಕೂಗಿಕೊಂಡಾಗ ಅಲ್ಲಿಂದ ಓಡಿಹೋಗಿರುವ ಚಿರತೆ.
ಇಂದು (ಮೇ.31) ಅದೇ ಸ್ಥಳಕ್ಕೆ ಹೋಗಿ ನೋಡಿದಾಗ ಹಸುವನ್ನು ಪೂರ್ತಿಯಾಗಿ ತಿಂದು ತೇಗಿರುವ ಚಿರತೆ. ಸಾವಿರಾರು ರೂ. ಮೌಲ್ಯದ ಹಸುವನ್ನು ಕಳೆದುಕೊಂಡ ರೈತ ಮಹಿಳೆ ಗೌರಮ್ಮ ಸಂಕಷ್ಟದಲ್ಲಿದ್ದಾರೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಇಂತಹದ್ದೇ ಘಟನೆ ಮೇ.29ರಂದು ತಾಲೂಕಿನ ತೂಬಗೆರೆ ಹೋಬಳಿಯ ಹಿರೇಮುದ್ದೇನಹಳ್ಳಿ ಗ್ರಾಮದಲ್ಲಿ ನಡೆದಿತ್ತು. ಈ ಘಟನೆ ಮಾಸುವ ಮೊದಲೇ ಮತ್ತೊಂದು ಘಟನೆ ಸಂಭವಿಸಿದೆ. ಪ್ರಾಣಿಗಳ ಮೇಲೆ ಚಿರತೆ ದಾಳಿ ಕಂಡು, ಕೇಳಿ ಭಯ ಭೀತರಾಗಿರುವ ಜನ.
ಚಿರತೆಯಿಂದ ಅದೃಷ್ಟವಶಾತ್ ಮನುಷ್ಯನಿಗೆ ಯಾವ ಹಾನಿಯಾಗಿಲ್ಲ. ಹಾನಿಯಾಗುವುದಕ್ಕೂ ಮುನ್ನ ಚಿರತೆಯನ್ನ ಸೆರೆಹಿಡಿದು ನೆಮ್ಮದಿ ಜೀವನ ನಡೆಸಲು ಅನುವುಮಾಡಿಕೊಡುವಂತೆ ಅರಣ್ಯ ಇಲಾಖೆಗೆ ಜನ ಮನವಿ ಮಾಡಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…