ಚಿರತೆ ದಾಳಿಗೆ ಸುಮಾರು 30 ಸಾವಿರ ಬೆಲೆ ಬಾಳುವ ಹಸು ಬಲಿಯಾಗಿರುವ ಘಟನೆ ತಾಲೂಕಿನ ಕೆಳಗಿನಜೂಗಾನಹಳ್ಳಿ ಗ್ರಾಮದ ಹೊರವಲಯದ ಕಾಡಿನಲ್ಲಿ ನಡೆದಿದೆ.
ಕೆಳಗಿನಜೂಗಾನಹಳ್ಳಿ ಗ್ರಾಮದ ನಿವಾಸಿ ರೈತ ಮಹಿಳೆ ಗೌರಮ್ಮ ಎಂದಿನಂತೆ ತಮ್ಮ ಹಸುಗಳನ್ನು ಮೇಯಿಸಲು ಕಾಡಿಗೆ ಹೋಗಿದ್ದಾರೆ. ಮೇ.30 (ನಿನ್ನೆ) ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಪ್ರತಿದಿನ ನೀರು ಕುಡಿಸುವ ಜಾಗದಲ್ಲಿ ಚಿರತೆ ಏಕಾಏಕಿ ಹಸುವಿನ ಮೇಲೆ ಎರಗಿ ಗಾಯಪಡಿಸಿದೆ. ಗಾಯಪಡಿಸುವುದನ್ನು ಕಂಡ ಗೌರಮ್ಮ ತಮ್ಮ ಹಸುವನ್ನು ಕಾಪಾಡಲು ಜೋರಾಗಿ ಕೂಗಿಕೊಂಡಾಗ ಅಲ್ಲಿಂದ ಓಡಿಹೋಗಿರುವ ಚಿರತೆ.
ಇಂದು (ಮೇ.31) ಅದೇ ಸ್ಥಳಕ್ಕೆ ಹೋಗಿ ನೋಡಿದಾಗ ಹಸುವನ್ನು ಪೂರ್ತಿಯಾಗಿ ತಿಂದು ತೇಗಿರುವ ಚಿರತೆ. ಸಾವಿರಾರು ರೂ. ಮೌಲ್ಯದ ಹಸುವನ್ನು ಕಳೆದುಕೊಂಡ ರೈತ ಮಹಿಳೆ ಗೌರಮ್ಮ ಸಂಕಷ್ಟದಲ್ಲಿದ್ದಾರೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಇಂತಹದ್ದೇ ಘಟನೆ ಮೇ.29ರಂದು ತಾಲೂಕಿನ ತೂಬಗೆರೆ ಹೋಬಳಿಯ ಹಿರೇಮುದ್ದೇನಹಳ್ಳಿ ಗ್ರಾಮದಲ್ಲಿ ನಡೆದಿತ್ತು. ಈ ಘಟನೆ ಮಾಸುವ ಮೊದಲೇ ಮತ್ತೊಂದು ಘಟನೆ ಸಂಭವಿಸಿದೆ. ಪ್ರಾಣಿಗಳ ಮೇಲೆ ಚಿರತೆ ದಾಳಿ ಕಂಡು, ಕೇಳಿ ಭಯ ಭೀತರಾಗಿರುವ ಜನ.
ಚಿರತೆಯಿಂದ ಅದೃಷ್ಟವಶಾತ್ ಮನುಷ್ಯನಿಗೆ ಯಾವ ಹಾನಿಯಾಗಿಲ್ಲ. ಹಾನಿಯಾಗುವುದಕ್ಕೂ ಮುನ್ನ ಚಿರತೆಯನ್ನ ಸೆರೆಹಿಡಿದು ನೆಮ್ಮದಿ ಜೀವನ ನಡೆಸಲು ಅನುವುಮಾಡಿಕೊಡುವಂತೆ ಅರಣ್ಯ ಇಲಾಖೆಗೆ ಜನ ಮನವಿ ಮಾಡಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…