ಚಿರತೆ ದಾಳಿಗೆ ಮತ್ತೊಂದು ಹಸು ಬಲಿ: ಚಿರತೆ ದಾಳಿಗೆ ಸುಮಾರು 30 ಸಾವಿರ ಬೆಲೆ ಬಾಳುವ ಹಸು ಸ್ಥಳದಲ್ಲೇ ಸಾವು: ತಾಲೂಕಿನ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಘಟನೆ

ಚಿರತೆ ದಾಳಿಗೆ ಸುಮಾರು 30 ಸಾವಿರ ಬೆಲೆ ಬಾಳುವ ಹಸು ಬಲಿಯಾಗಿರುವ ಘಟನೆ ತಾಲೂಕಿನ ಕೆಳಗಿನಜೂಗಾನಹಳ್ಳಿ ಗ್ರಾಮದ ಹೊರವಲಯದ ಕಾಡಿನಲ್ಲಿ ನಡೆದಿದೆ.

ಕೆಳಗಿನಜೂಗಾನಹಳ್ಳಿ ಗ್ರಾಮದ ನಿವಾಸಿ ರೈತ‌‌ ಮಹಿಳೆ ಗೌರಮ್ಮ ಎಂದಿನಂತೆ ತಮ್ಮ ಹಸುಗಳನ್ನು ಮೇಯಿಸಲು ಕಾಡಿಗೆ ಹೋಗಿದ್ದಾರೆ. ಮೇ.30 (ನಿನ್ನೆ) ಮಧ್ಯಾಹ್ನ 2 ಗಂಟೆ‌ ಸಮಯದಲ್ಲಿ ಪ್ರತಿದಿನ ನೀರು ಕುಡಿಸುವ ಜಾಗದಲ್ಲಿ ಚಿರತೆ ಏಕಾಏಕಿ ಹಸುವಿನ ಮೇಲೆ ಎರಗಿ ಗಾಯಪಡಿಸಿದೆ. ಗಾಯಪಡಿಸುವುದನ್ನು ಕಂಡ ಗೌರಮ್ಮ ತಮ್ಮ ಹಸುವನ್ನು ಕಾಪಾಡಲು ಜೋರಾಗಿ ಕೂಗಿಕೊಂಡಾಗ ಅಲ್ಲಿಂದ ಓಡಿಹೋಗಿರುವ ಚಿರತೆ.

ಚಿರತೆ ಇಲ್ಲದ ಸಮಯದಲ್ಲಿ ಬಂದು ನೋಡಿದಾಗ ಹಸು ಸ್ಥಳದಲ್ಲೇ ಪ್ರಾಣ ಬಿಟ್ಟಿರುವುದನ್ನು ಕಂಡಿದ್ದಾರೆ. ಹೇಗೋ ಪ್ರಾಣ ಹೋಗಿದೆ ಎಂದು ಸ್ಥಳದಲ್ಲೇ ಮೃತ ಹಸುವನ್ನು ಬಿಟ್ಟು‌ ಮಿಕ್ಕುಳಿದ ಹಸುಗಳನ್ನು ಮನೆಗೆ ಹೊಡೆದುಕೊಂಡು ಬಂದಿರುವ ಗೌರಮ್ಮ.

ಇಂದು (ಮೇ.31) ಅದೇ ಸ್ಥಳಕ್ಕೆ ಹೋಗಿ ನೋಡಿದಾಗ ಹಸುವನ್ನು ಪೂರ್ತಿಯಾಗಿ ತಿಂದು ತೇಗಿರುವ ಚಿರತೆ. ಸಾವಿರಾರು ರೂ. ಮೌಲ್ಯದ ಹಸುವನ್ನು ಕಳೆದುಕೊಂಡ ರೈತ ಮಹಿಳೆ ಗೌರಮ್ಮ ಸಂಕಷ್ಟದಲ್ಲಿದ್ದಾರೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇಂತಹದ್ದೇ ಘಟನೆ ಮೇ.29ರಂದು ತಾಲೂಕಿನ ತೂಬಗೆರೆ ಹೋಬಳಿಯ ಹಿರೇಮುದ್ದೇನಹಳ್ಳಿ ಗ್ರಾಮದಲ್ಲಿ ನಡೆದಿತ್ತು. ಈ ಘಟನೆ ಮಾಸುವ ಮೊದಲೇ ಮತ್ತೊಂದು ಘಟನೆ ಸಂಭವಿಸಿದೆ. ಪ್ರಾಣಿಗಳ ಮೇಲೆ ಚಿರತೆ ದಾಳಿ ಕಂಡು, ಕೇಳಿ ಭಯ ಭೀತರಾಗಿರುವ ಜನ.

ಚಿರತೆಯಿಂದ ಅದೃಷ್ಟವಶಾತ್ ಮನುಷ್ಯನಿಗೆ ಯಾವ ಹಾನಿಯಾಗಿಲ್ಲ. ಹಾನಿಯಾಗುವುದಕ್ಕೂ ಮುನ್ನ ಚಿರತೆಯನ್ನ ಸೆರೆಹಿಡಿದು ನೆಮ್ಮದಿ ಜೀವನ ನಡೆಸಲು ಅನುವುಮಾಡಿಕೊಡುವಂತೆ ಅರಣ್ಯ ಇಲಾಖೆಗೆ ಜನ ಮನವಿ ಮಾಡಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

10 minutes ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

2 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

2 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

3 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

7 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

8 hours ago