ಚಿರತೆ ದಾಳಿಗೆ ಸುಮಾರು 30 ಸಾವಿರ ಬೆಲೆ ಬಾಳುವ ಹಸು ಬಲಿಯಾಗಿರುವ ಘಟನೆ ತಾಲೂಕಿನ ಕೆಳಗಿನಜೂಗಾನಹಳ್ಳಿ ಗ್ರಾಮದ ಹೊರವಲಯದ ಕಾಡಿನಲ್ಲಿ ನಡೆದಿದೆ.
ಕೆಳಗಿನಜೂಗಾನಹಳ್ಳಿ ಗ್ರಾಮದ ನಿವಾಸಿ ರೈತ ಮಹಿಳೆ ಗೌರಮ್ಮ ಎಂದಿನಂತೆ ತಮ್ಮ ಹಸುಗಳನ್ನು ಮೇಯಿಸಲು ಕಾಡಿಗೆ ಹೋಗಿದ್ದಾರೆ. ಮೇ.30 (ನಿನ್ನೆ) ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಪ್ರತಿದಿನ ನೀರು ಕುಡಿಸುವ ಜಾಗದಲ್ಲಿ ಚಿರತೆ ಏಕಾಏಕಿ ಹಸುವಿನ ಮೇಲೆ ಎರಗಿ ಗಾಯಪಡಿಸಿದೆ. ಗಾಯಪಡಿಸುವುದನ್ನು ಕಂಡ ಗೌರಮ್ಮ ತಮ್ಮ ಹಸುವನ್ನು ಕಾಪಾಡಲು ಜೋರಾಗಿ ಕೂಗಿಕೊಂಡಾಗ ಅಲ್ಲಿಂದ ಓಡಿಹೋಗಿರುವ ಚಿರತೆ.
ಇಂದು (ಮೇ.31) ಅದೇ ಸ್ಥಳಕ್ಕೆ ಹೋಗಿ ನೋಡಿದಾಗ ಹಸುವನ್ನು ಪೂರ್ತಿಯಾಗಿ ತಿಂದು ತೇಗಿರುವ ಚಿರತೆ. ಸಾವಿರಾರು ರೂ. ಮೌಲ್ಯದ ಹಸುವನ್ನು ಕಳೆದುಕೊಂಡ ರೈತ ಮಹಿಳೆ ಗೌರಮ್ಮ ಸಂಕಷ್ಟದಲ್ಲಿದ್ದಾರೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಇಂತಹದ್ದೇ ಘಟನೆ ಮೇ.29ರಂದು ತಾಲೂಕಿನ ತೂಬಗೆರೆ ಹೋಬಳಿಯ ಹಿರೇಮುದ್ದೇನಹಳ್ಳಿ ಗ್ರಾಮದಲ್ಲಿ ನಡೆದಿತ್ತು. ಈ ಘಟನೆ ಮಾಸುವ ಮೊದಲೇ ಮತ್ತೊಂದು ಘಟನೆ ಸಂಭವಿಸಿದೆ. ಪ್ರಾಣಿಗಳ ಮೇಲೆ ಚಿರತೆ ದಾಳಿ ಕಂಡು, ಕೇಳಿ ಭಯ ಭೀತರಾಗಿರುವ ಜನ.
ಚಿರತೆಯಿಂದ ಅದೃಷ್ಟವಶಾತ್ ಮನುಷ್ಯನಿಗೆ ಯಾವ ಹಾನಿಯಾಗಿಲ್ಲ. ಹಾನಿಯಾಗುವುದಕ್ಕೂ ಮುನ್ನ ಚಿರತೆಯನ್ನ ಸೆರೆಹಿಡಿದು ನೆಮ್ಮದಿ ಜೀವನ ನಡೆಸಲು ಅನುವುಮಾಡಿಕೊಡುವಂತೆ ಅರಣ್ಯ ಇಲಾಖೆಗೆ ಜನ ಮನವಿ ಮಾಡಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…