ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲೂಕಿನ ಕಸಬಾ ಹೋಬಳಿಯ ಹೊನ್ನಾಘಟ್ಟ ಗ್ರಾಮದ ದ್ರಾಕ್ಷಿ ತೋಟದಲ್ಲಿ ಭಾನುವಾರ ಸಂಜೆ ನಡೆದಿದೆ.
ಜಗಣ್ಣ ಎಂಬುವರ ತೋಟದಲ್ಲಿ ಚಿರತೆಯು ಮೇಕೆ ಮೇಲೆ ದಾಳಿ ಮಾಡಿ ಕೊಂದು ಹಾಕಿದೆ. ಜಗಣ್ಣ ಅವರ ತೋಟವನ್ನು ಲೀಸ್ಗೆ ಪಡೆದು ದ್ರಾಕ್ಷಿ ಬೆಳೆ ಇಟ್ಟಿದ್ದ ಮಧು ಎಂಬುವವರು ಸಮೀಪದಲ್ಲೇ ಇದ್ದರು ಚಿರತೆಯನ್ನು ನೋಡಿ ಗಾಬರಿಗೊಂಡು ಗ್ರಾಮಕ್ಕೆ ಓಡಿ ಬಂದಿದ್ದು, ಆತನನ್ನು ಗಮನಿಸಿದ ಚಿರತೆಯೂ ಸಹ ಬೇರೆಡೆ ಓಡಿ ಹೋಗಿದೆ ಎಂದು ತಿಳಿದು ಬಂದಿದೆ.
ಚಿರತೆ ದಾಳಿಯಿಂದ ಗಾಬರಿಗೊಂಡಿರುವ ಗ್ರಾಮಸ್ಥರು ಆದಷ್ಟೂ ಬೇಗ ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಹೊನ್ನಾಘಟ್ಟ ಗ್ರಾಮ ನಗರದಿಂದ ಸುಮಾರು ಐದು ಕಿಮೀ ದೂರದಲ್ಲಿದ್ದು ಚಿರತೆ ನಗರದ ಕಡೆಗೂ ದಾಳಿ ಮಾಡುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…