ಚಿರತೆ ದಾಳಿಗೆ ಮೇಕೆ ಬಲಿ: ಮಾಕಳಿ ಬೆಟ್ಟದ ತಪ್ಪಲಿನ ಸುತ್ತಾಮುತ್ತ ಹೆಚ್ಚಾದ ಚಿರತೆ ಹಾವಳಿ…!

ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲೂಕಿನ ತೂಬಗೆರೆ ಹೋಬಳಿಯ ಗುಂಜೂರು ಸಮೀಪವಿರುವ ಮಾಕಳಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.

ನಾಗಪ್ಪ ಎಂಬ ರೈತನಿಗೆ ಸೇರಿದ ಮೇಕೆ ಚಿರತೆ ದಾಳಿಗೆ ಬಲಿಯಾಗಿದೆ. ಎಂದಿನಂತೆ ತನ್ನ ಮೇಕೆಗಳನ್ನು ಮೇಯಲು ಕಾಡಿಗೆ ಕರೆದೊಯ್ದಿದ್ದಾರೆ. ಇಂದು ದಿಢೀರನೆ ಚಿರತೆ ಪ್ರತ್ಯಕ್ಷಗೊಂಡು ಒಂದು ಮೇಕೆಯನ್ನು ಬಲಿಪಡೆದು ಪರಾರಿಯಾಗಿದೆ.

ಮೇಕೆ ಮೇಲೆ ದಾಳಿ ನಡೆಸುವ ದೃಶ್ಯವನ್ನು ರೈತ ನಾಗಪ್ಪ ಕಣ್ಣಾರೆ ಕಂಡು ಕೂಗಿಕೊಂಡಾಗ ಅರೆಬರೆ‌ ತಿಂದು ಎಸ್ಕೇಪ್ ಆಗಿದೆ ಎಂದು ಹೇಳಲಾಗಿದೆ.

ಪ್ರತಿನಿತ್ಯ ಮಾಕಳಿ ಬೆಟ್ಟ ಟ್ರೆಕ್ಕಿಂಗ್ ಮಾಡಲು ನೂರಾರು ಜನರು ಬರುತ್ತಾರೆ. ಇದೀಗ ಚಿರತೆ ಹಾವಳಿ ಹೆಚ್ಚಾಗಿದ್ದು, ಒಬ್ಬೊಬ್ಬರೇ ಟ್ರೆಕ್ಕಿಂಗ್ ಹೋಗಲು ಭಯಭೀತರಾಗಿದ್ದಾರೆ.

ಕೂಡಲೇ ಚಿರತೆ ಜಾಡು ಹಿಡಿದು ಸೆರೆಹಿಡಿಯಬೇಕು ಎಂದು ಚಾರಣಿಗರು ಹಾಗೂ ಸುತ್ತಮುತ್ತಲಿನ‌ ಗ್ರಾಮಸ್ಥರು ಅರಣ್ಯ ಇಲಾಖೆಯಲ್ಲಿ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ರಂಗೋಲಿ ಬಿಡಿಸುತ್ತಿದ್ದ ಮಹಿಳೆಯ ಚಿನ್ನದ ಮಾಂಗಲ್ಯ ಸರ ಎಗರಿಸಿದ ಖದೀಮರು

ದೊಡ್ಡಬಳ್ಳಾಪುರ: ಶಿವರಾತ್ರಿ ಹಬ್ಬಕ್ಕೆಂದು ಮನೆಯ ಮುಂದೆ ರಂಗೋಲಿ ಬಿಡಿಸುತ್ತಿದ್ದ ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು, ಸರ ಕಳ್ಳರು ಎಸ್ಕೇಪ್…

17 minutes ago

ನಿಕ್ಷಯ ಮಿತ್ರ (Nikshay Mitra) ಕಾರ್ಯಕ್ರಮ ವೀಕ್ಷಣೆ ಹಾಗೂ ಫುಡ್ ಕಿಟ್ ವಿತರಣೆ

ಕೇಂದ್ರ ಟಿಬಿ ಡಿವಿಷನ್, ದೆಹಲಿಯಿಂದ ನಿಕ್ಷಯ ಮಿತ್ರ ಕಾರ್ಯಕ್ರಮದ ಪ್ರಗತಿ ವೀಕ್ಷಣೆಗಾಗಿ ತಾಂತ್ರಿಕ ಸಹಾಯ ತಂಡವು ದೊಡ್ಡಬಳ್ಳಾಪುರಕ್ಕೆ ಆಗಮಿಸಿ, ನಿಕ್ಷಯ…

33 minutes ago

ಹೊಸಕೋಟೆ ಸರಣಿ ಅಪಘಾತ ಪ್ರಕರಣ ಮಾಸುವ ಮುನ್ನವೇ, ನೆಲಮಂಗಲದ ಜಿಂದಾಲ್‌ ಸಮೀಪ ಮತ್ತೊಂದು ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರ ಮೂಲದ ಎನ್ನಲಾದ ಐವರ ಸಾವು

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ತುಮಕೂರು ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಕಾ…

2 hours ago

ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ- ಸಿಎಂ ಸಿದ್ದರಾಮಯ್ಯ

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು…

17 hours ago

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅದ್ಧೂರಿಯಾಗಿ ನಡೆದ “ಸೈನ್ಸ್ ಫೆಸ್ಟ್ – ಇನೋವೇಟಿವ್ ಅರೇನ” (ವಿಜ್ಞಾನ ಮೇಳ), ಕಿಡ್ಸ್ ಕಾರ್ನಿವಲ್: ವಿಜ್ಞಾನ ಮೇಳವನ್ನು ಉದ್ಘಾಟಿಸಿದ ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿನ ಕರೆನಹಳ್ಳಿಯಲ್ಲಿರುವ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿಂದು "ಸೈನ್ಸ್ ಫೆಸ್ಟ್ – ಇನೋವೇಟಿವ್ ಅರೇನ" (ವಿಜ್ಞಾನ ಮೇಳ) ವನ್ನು ಆಯೋಜಿಸಲಾಗಿತ್ತು.…

19 hours ago

ಶಿವ ಶಿವ ಶಿವ ಶಿವ……ನೆನಪಾಗುವೆ ನೀನು ಪ್ರತಿಕ್ಷಣವೂ…‌‌‌‌…..

ಶಿವರಾತ್ರಿ....... ಶಿವರಾತ್ರಿಯ ಶಿವ - ರಂಜಾನ್ ಅಲ್ಲಾ - ಕ್ರಿಸ್ಮಸ್ ಯೇಸು ನಾಮ ಸ್ಮರಣೆ..... ಶಿವ ಶಿವ ಶಿವ ಶಿವ......…

1 day ago