ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲೂಕಿನ ತೂಬಗೆರೆ ಹೋಬಳಿಯ ಗುಂಜೂರು ಸಮೀಪವಿರುವ ಮಾಕಳಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.
ನಾಗಪ್ಪ ಎಂಬ ರೈತನಿಗೆ ಸೇರಿದ ಮೇಕೆ ಚಿರತೆ ದಾಳಿಗೆ ಬಲಿಯಾಗಿದೆ. ಎಂದಿನಂತೆ ತನ್ನ ಮೇಕೆಗಳನ್ನು ಮೇಯಲು ಕಾಡಿಗೆ ಕರೆದೊಯ್ದಿದ್ದಾರೆ. ಇಂದು ದಿಢೀರನೆ ಚಿರತೆ ಪ್ರತ್ಯಕ್ಷಗೊಂಡು ಒಂದು ಮೇಕೆಯನ್ನು ಬಲಿಪಡೆದು ಪರಾರಿಯಾಗಿದೆ.
ಮೇಕೆ ಮೇಲೆ ದಾಳಿ ನಡೆಸುವ ದೃಶ್ಯವನ್ನು ರೈತ ನಾಗಪ್ಪ ಕಣ್ಣಾರೆ ಕಂಡು ಕೂಗಿಕೊಂಡಾಗ ಅರೆಬರೆ ತಿಂದು ಎಸ್ಕೇಪ್ ಆಗಿದೆ ಎಂದು ಹೇಳಲಾಗಿದೆ.
ಪ್ರತಿನಿತ್ಯ ಮಾಕಳಿ ಬೆಟ್ಟ ಟ್ರೆಕ್ಕಿಂಗ್ ಮಾಡಲು ನೂರಾರು ಜನರು ಬರುತ್ತಾರೆ. ಇದೀಗ ಚಿರತೆ ಹಾವಳಿ ಹೆಚ್ಚಾಗಿದ್ದು, ಒಬ್ಬೊಬ್ಬರೇ ಟ್ರೆಕ್ಕಿಂಗ್ ಹೋಗಲು ಭಯಭೀತರಾಗಿದ್ದಾರೆ.
ಕೂಡಲೇ ಚಿರತೆ ಜಾಡು ಹಿಡಿದು ಸೆರೆಹಿಡಿಯಬೇಕು ಎಂದು ಚಾರಣಿಗರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಅರಣ್ಯ ಇಲಾಖೆಯಲ್ಲಿ ಮನವಿ ಮಾಡಿದ್ದಾರೆ.
ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…
ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…
ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಂದಿ ಬೆಟ್ಟದ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…
ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…