ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲೂಕಿನ ತೂಬಗೆರೆ ಹೋಬಳಿಯ ಗುಂಜೂರು ಸಮೀಪವಿರುವ ಮಾಕಳಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.
ನಾಗಪ್ಪ ಎಂಬ ರೈತನಿಗೆ ಸೇರಿದ ಮೇಕೆ ಚಿರತೆ ದಾಳಿಗೆ ಬಲಿಯಾಗಿದೆ. ಎಂದಿನಂತೆ ತನ್ನ ಮೇಕೆಗಳನ್ನು ಮೇಯಲು ಕಾಡಿಗೆ ಕರೆದೊಯ್ದಿದ್ದಾರೆ. ಇಂದು ದಿಢೀರನೆ ಚಿರತೆ ಪ್ರತ್ಯಕ್ಷಗೊಂಡು ಒಂದು ಮೇಕೆಯನ್ನು ಬಲಿಪಡೆದು ಪರಾರಿಯಾಗಿದೆ.
ಮೇಕೆ ಮೇಲೆ ದಾಳಿ ನಡೆಸುವ ದೃಶ್ಯವನ್ನು ರೈತ ನಾಗಪ್ಪ ಕಣ್ಣಾರೆ ಕಂಡು ಕೂಗಿಕೊಂಡಾಗ ಅರೆಬರೆ ತಿಂದು ಎಸ್ಕೇಪ್ ಆಗಿದೆ ಎಂದು ಹೇಳಲಾಗಿದೆ.
ಪ್ರತಿನಿತ್ಯ ಮಾಕಳಿ ಬೆಟ್ಟ ಟ್ರೆಕ್ಕಿಂಗ್ ಮಾಡಲು ನೂರಾರು ಜನರು ಬರುತ್ತಾರೆ. ಇದೀಗ ಚಿರತೆ ಹಾವಳಿ ಹೆಚ್ಚಾಗಿದ್ದು, ಒಬ್ಬೊಬ್ಬರೇ ಟ್ರೆಕ್ಕಿಂಗ್ ಹೋಗಲು ಭಯಭೀತರಾಗಿದ್ದಾರೆ.
ಕೂಡಲೇ ಚಿರತೆ ಜಾಡು ಹಿಡಿದು ಸೆರೆಹಿಡಿಯಬೇಕು ಎಂದು ಚಾರಣಿಗರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಅರಣ್ಯ ಇಲಾಖೆಯಲ್ಲಿ ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…