ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲೂಕಿನ ತೂಬಗೆರೆ ಹೋಬಳಿಯ ಗುಂಜೂರು ಸಮೀಪವಿರುವ ಮಾಕಳಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.
ನಾಗಪ್ಪ ಎಂಬ ರೈತನಿಗೆ ಸೇರಿದ ಮೇಕೆ ಚಿರತೆ ದಾಳಿಗೆ ಬಲಿಯಾಗಿದೆ. ಎಂದಿನಂತೆ ತನ್ನ ಮೇಕೆಗಳನ್ನು ಮೇಯಲು ಕಾಡಿಗೆ ಕರೆದೊಯ್ದಿದ್ದಾರೆ. ಇಂದು ದಿಢೀರನೆ ಚಿರತೆ ಪ್ರತ್ಯಕ್ಷಗೊಂಡು ಒಂದು ಮೇಕೆಯನ್ನು ಬಲಿಪಡೆದು ಪರಾರಿಯಾಗಿದೆ.
ಮೇಕೆ ಮೇಲೆ ದಾಳಿ ನಡೆಸುವ ದೃಶ್ಯವನ್ನು ರೈತ ನಾಗಪ್ಪ ಕಣ್ಣಾರೆ ಕಂಡು ಕೂಗಿಕೊಂಡಾಗ ಅರೆಬರೆ ತಿಂದು ಎಸ್ಕೇಪ್ ಆಗಿದೆ ಎಂದು ಹೇಳಲಾಗಿದೆ.
ಪ್ರತಿನಿತ್ಯ ಮಾಕಳಿ ಬೆಟ್ಟ ಟ್ರೆಕ್ಕಿಂಗ್ ಮಾಡಲು ನೂರಾರು ಜನರು ಬರುತ್ತಾರೆ. ಇದೀಗ ಚಿರತೆ ಹಾವಳಿ ಹೆಚ್ಚಾಗಿದ್ದು, ಒಬ್ಬೊಬ್ಬರೇ ಟ್ರೆಕ್ಕಿಂಗ್ ಹೋಗಲು ಭಯಭೀತರಾಗಿದ್ದಾರೆ.
ಕೂಡಲೇ ಚಿರತೆ ಜಾಡು ಹಿಡಿದು ಸೆರೆಹಿಡಿಯಬೇಕು ಎಂದು ಚಾರಣಿಗರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಅರಣ್ಯ ಇಲಾಖೆಯಲ್ಲಿ ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…
ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…