ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲೂಕಿನ ತೂಬಗೆರೆ ಹೋಬಳಿಯ ಗುಂಜೂರು ಸಮೀಪವಿರುವ ಮಾಕಳಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.
ನಾಗಪ್ಪ ಎಂಬ ರೈತನಿಗೆ ಸೇರಿದ ಮೇಕೆ ಚಿರತೆ ದಾಳಿಗೆ ಬಲಿಯಾಗಿದೆ. ಎಂದಿನಂತೆ ತನ್ನ ಮೇಕೆಗಳನ್ನು ಮೇಯಲು ಕಾಡಿಗೆ ಕರೆದೊಯ್ದಿದ್ದಾರೆ. ಇಂದು ದಿಢೀರನೆ ಚಿರತೆ ಪ್ರತ್ಯಕ್ಷಗೊಂಡು ಒಂದು ಮೇಕೆಯನ್ನು ಬಲಿಪಡೆದು ಪರಾರಿಯಾಗಿದೆ.
ಮೇಕೆ ಮೇಲೆ ದಾಳಿ ನಡೆಸುವ ದೃಶ್ಯವನ್ನು ರೈತ ನಾಗಪ್ಪ ಕಣ್ಣಾರೆ ಕಂಡು ಕೂಗಿಕೊಂಡಾಗ ಅರೆಬರೆ ತಿಂದು ಎಸ್ಕೇಪ್ ಆಗಿದೆ ಎಂದು ಹೇಳಲಾಗಿದೆ.
ಪ್ರತಿನಿತ್ಯ ಮಾಕಳಿ ಬೆಟ್ಟ ಟ್ರೆಕ್ಕಿಂಗ್ ಮಾಡಲು ನೂರಾರು ಜನರು ಬರುತ್ತಾರೆ. ಇದೀಗ ಚಿರತೆ ಹಾವಳಿ ಹೆಚ್ಚಾಗಿದ್ದು, ಒಬ್ಬೊಬ್ಬರೇ ಟ್ರೆಕ್ಕಿಂಗ್ ಹೋಗಲು ಭಯಭೀತರಾಗಿದ್ದಾರೆ.
ಕೂಡಲೇ ಚಿರತೆ ಜಾಡು ಹಿಡಿದು ಸೆರೆಹಿಡಿಯಬೇಕು ಎಂದು ಚಾರಣಿಗರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಅರಣ್ಯ ಇಲಾಖೆಯಲ್ಲಿ ಮನವಿ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…