ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲೂಕಿನ ತೂಬಗೆರೆ ಹೋಬಳಿಯ ಗುಂಜೂರು ಸಮೀಪವಿರುವ ಮಾಕಳಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.
ನಾಗಪ್ಪ ಎಂಬ ರೈತನಿಗೆ ಸೇರಿದ ಮೇಕೆ ಚಿರತೆ ದಾಳಿಗೆ ಬಲಿಯಾಗಿದೆ. ಎಂದಿನಂತೆ ತನ್ನ ಮೇಕೆಗಳನ್ನು ಮೇಯಲು ಕಾಡಿಗೆ ಕರೆದೊಯ್ದಿದ್ದಾರೆ. ಇಂದು ದಿಢೀರನೆ ಚಿರತೆ ಪ್ರತ್ಯಕ್ಷಗೊಂಡು ಒಂದು ಮೇಕೆಯನ್ನು ಬಲಿಪಡೆದು ಪರಾರಿಯಾಗಿದೆ.
ಮೇಕೆ ಮೇಲೆ ದಾಳಿ ನಡೆಸುವ ದೃಶ್ಯವನ್ನು ರೈತ ನಾಗಪ್ಪ ಕಣ್ಣಾರೆ ಕಂಡು ಕೂಗಿಕೊಂಡಾಗ ಅರೆಬರೆ ತಿಂದು ಎಸ್ಕೇಪ್ ಆಗಿದೆ ಎಂದು ಹೇಳಲಾಗಿದೆ.
ಪ್ರತಿನಿತ್ಯ ಮಾಕಳಿ ಬೆಟ್ಟ ಟ್ರೆಕ್ಕಿಂಗ್ ಮಾಡಲು ನೂರಾರು ಜನರು ಬರುತ್ತಾರೆ. ಇದೀಗ ಚಿರತೆ ಹಾವಳಿ ಹೆಚ್ಚಾಗಿದ್ದು, ಒಬ್ಬೊಬ್ಬರೇ ಟ್ರೆಕ್ಕಿಂಗ್ ಹೋಗಲು ಭಯಭೀತರಾಗಿದ್ದಾರೆ.
ಕೂಡಲೇ ಚಿರತೆ ಜಾಡು ಹಿಡಿದು ಸೆರೆಹಿಡಿಯಬೇಕು ಎಂದು ಚಾರಣಿಗರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಅರಣ್ಯ ಇಲಾಖೆಯಲ್ಲಿ ಮನವಿ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…