ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲೂಕಿನ ತೂಬಗೆರೆ ಹೋಬಳಿಯ ಗುಂಜೂರು ಸಮೀಪವಿರುವ ಮಾಕಳಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.
ನಾಗಪ್ಪ ಎಂಬ ರೈತನಿಗೆ ಸೇರಿದ ಮೇಕೆ ಚಿರತೆ ದಾಳಿಗೆ ಬಲಿಯಾಗಿದೆ. ಎಂದಿನಂತೆ ತನ್ನ ಮೇಕೆಗಳನ್ನು ಮೇಯಲು ಕಾಡಿಗೆ ಕರೆದೊಯ್ದಿದ್ದಾರೆ. ಇಂದು ದಿಢೀರನೆ ಚಿರತೆ ಪ್ರತ್ಯಕ್ಷಗೊಂಡು ಒಂದು ಮೇಕೆಯನ್ನು ಬಲಿಪಡೆದು ಪರಾರಿಯಾಗಿದೆ.
ಮೇಕೆ ಮೇಲೆ ದಾಳಿ ನಡೆಸುವ ದೃಶ್ಯವನ್ನು ರೈತ ನಾಗಪ್ಪ ಕಣ್ಣಾರೆ ಕಂಡು ಕೂಗಿಕೊಂಡಾಗ ಅರೆಬರೆ ತಿಂದು ಎಸ್ಕೇಪ್ ಆಗಿದೆ ಎಂದು ಹೇಳಲಾಗಿದೆ.
ಪ್ರತಿನಿತ್ಯ ಮಾಕಳಿ ಬೆಟ್ಟ ಟ್ರೆಕ್ಕಿಂಗ್ ಮಾಡಲು ನೂರಾರು ಜನರು ಬರುತ್ತಾರೆ. ಇದೀಗ ಚಿರತೆ ಹಾವಳಿ ಹೆಚ್ಚಾಗಿದ್ದು, ಒಬ್ಬೊಬ್ಬರೇ ಟ್ರೆಕ್ಕಿಂಗ್ ಹೋಗಲು ಭಯಭೀತರಾಗಿದ್ದಾರೆ.
ಕೂಡಲೇ ಚಿರತೆ ಜಾಡು ಹಿಡಿದು ಸೆರೆಹಿಡಿಯಬೇಕು ಎಂದು ಚಾರಣಿಗರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಅರಣ್ಯ ಇಲಾಖೆಯಲ್ಲಿ ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…