ಚೀಟಿ ವ್ಯವಹಾರ ವಂಚನೆ ಆರೋಪ: ಏಳು ಕೋಟಿ ಚೀಟಿ ವ್ಯವಹಾರ ನಡೆಸಿ ಮಹಿಳೆ ಎಸ್ಕೆಪ್: ಹಣ ಕಳೆದುಕೊಂಡ ಜನ ಕಂಗಾಲು

ಚೀಟಿ ವ್ಯವಹಾರ ನಡೆಸುತ್ತಿದ್ದ ಪುಷ್ಪಕಲಾ ಎಂಬುವವರು  ಸುಮಾರು 60 ಮಂದಿಗೆ ಸುಮಾರು 7 ಕೋಟಿ ರೂ. ವಂಚಿಸಿ, ಹಣ ಸಮೇತ ಪರಾರಿಯಾಗಿದ್ದಾರೆ ಎಂಬ ಆರೋಪ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಳಿಬಂದಿದೆ.

ದೊಡ್ಡಬಳ್ಳಾಪುರ ನಗರದ ಮುಕ್ತಾಂಭಿಕ ಬಡಾವಣೆಯ ನಿವಾಸಿ ಈ ಪುಷ್ಪಕಲಾ, ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕಳೆದ ನಾಲ್ದೈದು ವರ್ಷಗಳಿಂದ ಚೀಟಿ ವ್ಯವಹಾರವನ್ನ ನಡೆಸುತ್ತಿದ್ದರು. ಕಳೆದ ನಾಲ್ಕು ವರ್ಷದಿಂದ ಕಟ್ಟುನಿಟ್ಟಾಗಿ ಚೀಟಿ ವ್ಯವಹಾರ ನಡೆಸುವ ಮೂಲಕ ಸುತ್ತಮುತ್ತಲಿನ ಜನರು ನಂಬಿಕೆ ಗಳಿಸಿದ್ದರು. ಮಗಳ ಮದುವೆಗಾಗಿ, ಮನೆ ಕಟ್ಟಲು, ಬ್ಯುಸಿನೆಸ್ ಮಾಡುವ ಕಾರಣಕ್ಕೆಂದು ಸುಮಾರು 250ಕ್ಕೂ ಹೆಚ್ಚು ಜನರು ಪುಷ್ಪಕಲಾ ಬಳಿ ಚೀಟಿ ಹಾಕಿದ್ದರು ಎನ್ನಲಾಗಿದೆ.

ಆಕ್ಟೋಬರ್ 27ರಂದು ಗಂಡ ರುದ್ರಆರಾಧ್ಯ ಜಮೀನು ಕೆಲಸಕ್ಕೆಂದು ಊರಿಗೆ ಹೋಗಿದ್ದಾರೆ. ಮಕ್ಕಳು ಕಾಲೇಜಿಗೆ ಹೋಗಿದ್ದಾರೆ. ಈ ವೇಳೆ ಆಕೆ ಮನೆಯಿಂದ ನಾಪತ್ತೆಯಾಗಿದ್ದಾಳೆ. ಮನೆಯಿಂದ ನಾಪತ್ತೆಯಾದ ಪುಷ್ಪಕಲಾ ಗಂಡನಿಗೆ ವಾಟ್ಸಾಪ್ ನಲ್ಲಿ ಆಡಿಯೋ ಮೆಸೇಜ್ ಕಳಿಸಿದ್ದು, ತನ್ನಗೆ ಯಾರೋ ಮೋಸ ಮಾಡಿದ್ದು, ವಿಷ ಕುಡಿದು ಸಾಯುವುದಾಗಿ ಹೇಳಿದ್ದಾಳೆ. ಗಂಡ ರುದ್ರಆರಾಧ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಹೆಂಡತಿ ನಾಪತ್ತೆ ಪ್ರಕರಣ ದಾಖಲು ಮಾಡಿದ್ದಾರೆ.

ಪುಷ್ಪಕಲಾ ನಾಪತ್ತೆ ಪ್ರಕರಣ ಚೀಟಿದಾರರ ಆತಂಕಕ್ಕೆ ಕಾರಣವಾಗಿದೆ. ನಗರದ ಮುತ್ಯಾಲಮ್ಮ ದೇವಸ್ಥಾನದ ಬಳಿ ಸೇರಿದ ಚೀಟಿದಾರರು ಪುಷ್ಪಕಲಾಳ ವಂಚನೆಯನ್ನ ಬಯಲು ಮಾಡಿದ್ದಾರೆ.

ಕನ್ನಡಪರ ಹೋರಾಟಗಾರರಾದ ರಾಮಕೃಷ್ಣ ಮಾತನಾಡಿ, ಚೀಟಿದಾರರಿಗೆ ಧೈರ್ಯ ಹೇಳಿದ ಅವರು, ಬಡ ಕೂಲಿ ಕಾರ್ಮಿಕರು, ಗಾರ್ಮೆಂಟ್ಸ್ ಮಹಿಳೆಯರು, ಗಾರೆ ಕೆಲಸಗಾರರು ತಮ್ಮ ದುಡಿಮೆ ಹಣದೊಂದಿಗೆ ಪುಷ್ಪಕಲಾ ಪರಾರಿಯಾಗಿದ್ದಾರೆ, ಪೊಲೀಸ್ ಠಾಣೆಗೆ ದೂರು ನೀಡಿ ಕಾನೂನು ಕ್ರಮದ ಮೂಲಕ ಬಡವರಿಗೆ ಹಣ ಕೊಡಿಸುವ ಕೆಲಸ ಮಾಡುವುದಾಗಿ ಹೇಳಿದರು.

ನಿವೃತ್ತ ಶಿಕ್ಷಕರಾದ ಗಜೇಂದ್ರ ಮಾತನಾಡಿ, ಕಳೆದ ನಾಲ್ಕು ವರ್ಷದಿಂದ ಪುಷ್ಪಕಲಾ ಶಿಸ್ತಿನಿಂದ ಚೀಟಿ ವ್ಯವಹಾರ ನೆಡೆಸುತ್ತಿದ್ದರು, ಇದೇ ನಂಬಿಕೆ ಮೇಲೆ ನಾನು ಸಹ ನಾಲ್ಕೈದು ಚೀಟಿಗಳ ಹಾಕಿದ್ದೇ, ಚೀಟಿ ಕಂತು ಕಟ್ಟಲು ಪ್ರತಿ ತಿಂಗಳು 1 ಲಕ್ಷಕ್ಕೂ ಹೆಚ್ಚು ಹಣವನ್ನ ಪೋನ್ ಪೇ, ಅಕೌಂಟ್ ಮೂಲಕ ಪಾವತಿ ಮಾಡಿದ್ದೇನೆ, ಆಕೆಯ ವಂಚನೆಯಿAದ ಸುಮಾರು 35 ಲಕ್ಷ ಹಣವನ್ನ ಕಳೆದುಕೊಂಡಿದ್ದೇನೆ. ಇನ್ನೂ ದೊಡ್ಡಬಳ್ಳಾಪುರದಲ್ಲಿ ಅಕ್ರಮ ಚೀಟಿ ದಂಧೆ ನಡೆಯುತ್ತಿದ್ದು ಇವುಗಳಿಗೆ ಕಡಿವಾಣ ಹಾಕಿದ್ದಾಗ ಮಾತ್ರ ಇಂತಹ ವಂಚನೆಗಳನ್ನ ತಡೆಗಟ್ಟ ಬಹುದೆಂದರು.

 ಕೆಲ ವರ್ಷಗಳಿಂದ ಚೀಟಿ ವ್ಯವಹಾರ ನಡೆಸುತ್ತಿದ್ದರು. 2015ರಲ್ಲಿ ಹೊಸ ಚೀಟಿ ಆರಂಭಿಸಿದ್ದರು. ಸುಮಾರು 60 ಮಂದಿ ಪ್ರತಿ ತಿಂಗಳು ಅವರ ಬಳಿ ಚೀಟಿ ಹಣ ಕಟ್ಟುತ್ತಿದ್ದೆವು. ಆದರೆ, ಈ ಬಾರಿ ಅನ್ಯಾಯ ಮಾಡಿದ್ದಾರೆ. ನಾವು ಕೂಲಿ ಮಾಡಿ ಜೀವನ ಸಾಗಿಸುವವರು. ಆದ್ದರಿಂದ ಆರೋಪಿಗಳನ್ನು ಪತ್ತೆ ಮಾಡಿ ತಮ್ಮ ಹಣವನ್ನು ತಮಗೆ ವಾಪಸ್ ಕೊಡಿಸಬೇಕು,” ಎಂದು ಮೋಸ ಹೋದವರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

2 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

14 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

17 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

19 hours ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

21 hours ago

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

22 hours ago