ಚೀಟಿ ವ್ಯವಹಾರ ವಂಚನೆ ಆರೋಪ: ಏಳು ಕೋಟಿ ಚೀಟಿ ವ್ಯವಹಾರ ನಡೆಸಿ ಮಹಿಳೆ ಎಸ್ಕೆಪ್: ಹಣ ಕಳೆದುಕೊಂಡ ಜನ ಕಂಗಾಲು

ಚೀಟಿ ವ್ಯವಹಾರ ನಡೆಸುತ್ತಿದ್ದ ಪುಷ್ಪಕಲಾ ಎಂಬುವವರು  ಸುಮಾರು 60 ಮಂದಿಗೆ ಸುಮಾರು 7 ಕೋಟಿ ರೂ. ವಂಚಿಸಿ, ಹಣ ಸಮೇತ ಪರಾರಿಯಾಗಿದ್ದಾರೆ ಎಂಬ ಆರೋಪ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಳಿಬಂದಿದೆ.

ದೊಡ್ಡಬಳ್ಳಾಪುರ ನಗರದ ಮುಕ್ತಾಂಭಿಕ ಬಡಾವಣೆಯ ನಿವಾಸಿ ಈ ಪುಷ್ಪಕಲಾ, ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕಳೆದ ನಾಲ್ದೈದು ವರ್ಷಗಳಿಂದ ಚೀಟಿ ವ್ಯವಹಾರವನ್ನ ನಡೆಸುತ್ತಿದ್ದರು. ಕಳೆದ ನಾಲ್ಕು ವರ್ಷದಿಂದ ಕಟ್ಟುನಿಟ್ಟಾಗಿ ಚೀಟಿ ವ್ಯವಹಾರ ನಡೆಸುವ ಮೂಲಕ ಸುತ್ತಮುತ್ತಲಿನ ಜನರು ನಂಬಿಕೆ ಗಳಿಸಿದ್ದರು. ಮಗಳ ಮದುವೆಗಾಗಿ, ಮನೆ ಕಟ್ಟಲು, ಬ್ಯುಸಿನೆಸ್ ಮಾಡುವ ಕಾರಣಕ್ಕೆಂದು ಸುಮಾರು 250ಕ್ಕೂ ಹೆಚ್ಚು ಜನರು ಪುಷ್ಪಕಲಾ ಬಳಿ ಚೀಟಿ ಹಾಕಿದ್ದರು ಎನ್ನಲಾಗಿದೆ.

ಆಕ್ಟೋಬರ್ 27ರಂದು ಗಂಡ ರುದ್ರಆರಾಧ್ಯ ಜಮೀನು ಕೆಲಸಕ್ಕೆಂದು ಊರಿಗೆ ಹೋಗಿದ್ದಾರೆ. ಮಕ್ಕಳು ಕಾಲೇಜಿಗೆ ಹೋಗಿದ್ದಾರೆ. ಈ ವೇಳೆ ಆಕೆ ಮನೆಯಿಂದ ನಾಪತ್ತೆಯಾಗಿದ್ದಾಳೆ. ಮನೆಯಿಂದ ನಾಪತ್ತೆಯಾದ ಪುಷ್ಪಕಲಾ ಗಂಡನಿಗೆ ವಾಟ್ಸಾಪ್ ನಲ್ಲಿ ಆಡಿಯೋ ಮೆಸೇಜ್ ಕಳಿಸಿದ್ದು, ತನ್ನಗೆ ಯಾರೋ ಮೋಸ ಮಾಡಿದ್ದು, ವಿಷ ಕುಡಿದು ಸಾಯುವುದಾಗಿ ಹೇಳಿದ್ದಾಳೆ. ಗಂಡ ರುದ್ರಆರಾಧ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಹೆಂಡತಿ ನಾಪತ್ತೆ ಪ್ರಕರಣ ದಾಖಲು ಮಾಡಿದ್ದಾರೆ.

ಪುಷ್ಪಕಲಾ ನಾಪತ್ತೆ ಪ್ರಕರಣ ಚೀಟಿದಾರರ ಆತಂಕಕ್ಕೆ ಕಾರಣವಾಗಿದೆ. ನಗರದ ಮುತ್ಯಾಲಮ್ಮ ದೇವಸ್ಥಾನದ ಬಳಿ ಸೇರಿದ ಚೀಟಿದಾರರು ಪುಷ್ಪಕಲಾಳ ವಂಚನೆಯನ್ನ ಬಯಲು ಮಾಡಿದ್ದಾರೆ.

ಕನ್ನಡಪರ ಹೋರಾಟಗಾರರಾದ ರಾಮಕೃಷ್ಣ ಮಾತನಾಡಿ, ಚೀಟಿದಾರರಿಗೆ ಧೈರ್ಯ ಹೇಳಿದ ಅವರು, ಬಡ ಕೂಲಿ ಕಾರ್ಮಿಕರು, ಗಾರ್ಮೆಂಟ್ಸ್ ಮಹಿಳೆಯರು, ಗಾರೆ ಕೆಲಸಗಾರರು ತಮ್ಮ ದುಡಿಮೆ ಹಣದೊಂದಿಗೆ ಪುಷ್ಪಕಲಾ ಪರಾರಿಯಾಗಿದ್ದಾರೆ, ಪೊಲೀಸ್ ಠಾಣೆಗೆ ದೂರು ನೀಡಿ ಕಾನೂನು ಕ್ರಮದ ಮೂಲಕ ಬಡವರಿಗೆ ಹಣ ಕೊಡಿಸುವ ಕೆಲಸ ಮಾಡುವುದಾಗಿ ಹೇಳಿದರು.

ನಿವೃತ್ತ ಶಿಕ್ಷಕರಾದ ಗಜೇಂದ್ರ ಮಾತನಾಡಿ, ಕಳೆದ ನಾಲ್ಕು ವರ್ಷದಿಂದ ಪುಷ್ಪಕಲಾ ಶಿಸ್ತಿನಿಂದ ಚೀಟಿ ವ್ಯವಹಾರ ನೆಡೆಸುತ್ತಿದ್ದರು, ಇದೇ ನಂಬಿಕೆ ಮೇಲೆ ನಾನು ಸಹ ನಾಲ್ಕೈದು ಚೀಟಿಗಳ ಹಾಕಿದ್ದೇ, ಚೀಟಿ ಕಂತು ಕಟ್ಟಲು ಪ್ರತಿ ತಿಂಗಳು 1 ಲಕ್ಷಕ್ಕೂ ಹೆಚ್ಚು ಹಣವನ್ನ ಪೋನ್ ಪೇ, ಅಕೌಂಟ್ ಮೂಲಕ ಪಾವತಿ ಮಾಡಿದ್ದೇನೆ, ಆಕೆಯ ವಂಚನೆಯಿAದ ಸುಮಾರು 35 ಲಕ್ಷ ಹಣವನ್ನ ಕಳೆದುಕೊಂಡಿದ್ದೇನೆ. ಇನ್ನೂ ದೊಡ್ಡಬಳ್ಳಾಪುರದಲ್ಲಿ ಅಕ್ರಮ ಚೀಟಿ ದಂಧೆ ನಡೆಯುತ್ತಿದ್ದು ಇವುಗಳಿಗೆ ಕಡಿವಾಣ ಹಾಕಿದ್ದಾಗ ಮಾತ್ರ ಇಂತಹ ವಂಚನೆಗಳನ್ನ ತಡೆಗಟ್ಟ ಬಹುದೆಂದರು.

 ಕೆಲ ವರ್ಷಗಳಿಂದ ಚೀಟಿ ವ್ಯವಹಾರ ನಡೆಸುತ್ತಿದ್ದರು. 2015ರಲ್ಲಿ ಹೊಸ ಚೀಟಿ ಆರಂಭಿಸಿದ್ದರು. ಸುಮಾರು 60 ಮಂದಿ ಪ್ರತಿ ತಿಂಗಳು ಅವರ ಬಳಿ ಚೀಟಿ ಹಣ ಕಟ್ಟುತ್ತಿದ್ದೆವು. ಆದರೆ, ಈ ಬಾರಿ ಅನ್ಯಾಯ ಮಾಡಿದ್ದಾರೆ. ನಾವು ಕೂಲಿ ಮಾಡಿ ಜೀವನ ಸಾಗಿಸುವವರು. ಆದ್ದರಿಂದ ಆರೋಪಿಗಳನ್ನು ಪತ್ತೆ ಮಾಡಿ ತಮ್ಮ ಹಣವನ್ನು ತಮಗೆ ವಾಪಸ್ ಕೊಡಿಸಬೇಕು,” ಎಂದು ಮೋಸ ಹೋದವರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

12 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

16 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

23 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

24 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago