ಚೀಟಿ ವ್ಯವಹಾರ ವಂಚನೆ ಆರೋಪ: ಏಳು ಕೋಟಿ ಚೀಟಿ ವ್ಯವಹಾರ ನಡೆಸಿ ಮಹಿಳೆ ಎಸ್ಕೆಪ್: ಹಣ ಕಳೆದುಕೊಂಡ ಜನ ಕಂಗಾಲು

ಚೀಟಿ ವ್ಯವಹಾರ ನಡೆಸುತ್ತಿದ್ದ ಪುಷ್ಪಕಲಾ ಎಂಬುವವರು  ಸುಮಾರು 60 ಮಂದಿಗೆ ಸುಮಾರು 7 ಕೋಟಿ ರೂ. ವಂಚಿಸಿ, ಹಣ ಸಮೇತ ಪರಾರಿಯಾಗಿದ್ದಾರೆ ಎಂಬ ಆರೋಪ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಳಿಬಂದಿದೆ.

ದೊಡ್ಡಬಳ್ಳಾಪುರ ನಗರದ ಮುಕ್ತಾಂಭಿಕ ಬಡಾವಣೆಯ ನಿವಾಸಿ ಈ ಪುಷ್ಪಕಲಾ, ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕಳೆದ ನಾಲ್ದೈದು ವರ್ಷಗಳಿಂದ ಚೀಟಿ ವ್ಯವಹಾರವನ್ನ ನಡೆಸುತ್ತಿದ್ದರು. ಕಳೆದ ನಾಲ್ಕು ವರ್ಷದಿಂದ ಕಟ್ಟುನಿಟ್ಟಾಗಿ ಚೀಟಿ ವ್ಯವಹಾರ ನಡೆಸುವ ಮೂಲಕ ಸುತ್ತಮುತ್ತಲಿನ ಜನರು ನಂಬಿಕೆ ಗಳಿಸಿದ್ದರು. ಮಗಳ ಮದುವೆಗಾಗಿ, ಮನೆ ಕಟ್ಟಲು, ಬ್ಯುಸಿನೆಸ್ ಮಾಡುವ ಕಾರಣಕ್ಕೆಂದು ಸುಮಾರು 250ಕ್ಕೂ ಹೆಚ್ಚು ಜನರು ಪುಷ್ಪಕಲಾ ಬಳಿ ಚೀಟಿ ಹಾಕಿದ್ದರು ಎನ್ನಲಾಗಿದೆ.

ಆಕ್ಟೋಬರ್ 27ರಂದು ಗಂಡ ರುದ್ರಆರಾಧ್ಯ ಜಮೀನು ಕೆಲಸಕ್ಕೆಂದು ಊರಿಗೆ ಹೋಗಿದ್ದಾರೆ. ಮಕ್ಕಳು ಕಾಲೇಜಿಗೆ ಹೋಗಿದ್ದಾರೆ. ಈ ವೇಳೆ ಆಕೆ ಮನೆಯಿಂದ ನಾಪತ್ತೆಯಾಗಿದ್ದಾಳೆ. ಮನೆಯಿಂದ ನಾಪತ್ತೆಯಾದ ಪುಷ್ಪಕಲಾ ಗಂಡನಿಗೆ ವಾಟ್ಸಾಪ್ ನಲ್ಲಿ ಆಡಿಯೋ ಮೆಸೇಜ್ ಕಳಿಸಿದ್ದು, ತನ್ನಗೆ ಯಾರೋ ಮೋಸ ಮಾಡಿದ್ದು, ವಿಷ ಕುಡಿದು ಸಾಯುವುದಾಗಿ ಹೇಳಿದ್ದಾಳೆ. ಗಂಡ ರುದ್ರಆರಾಧ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಹೆಂಡತಿ ನಾಪತ್ತೆ ಪ್ರಕರಣ ದಾಖಲು ಮಾಡಿದ್ದಾರೆ.

ಪುಷ್ಪಕಲಾ ನಾಪತ್ತೆ ಪ್ರಕರಣ ಚೀಟಿದಾರರ ಆತಂಕಕ್ಕೆ ಕಾರಣವಾಗಿದೆ. ನಗರದ ಮುತ್ಯಾಲಮ್ಮ ದೇವಸ್ಥಾನದ ಬಳಿ ಸೇರಿದ ಚೀಟಿದಾರರು ಪುಷ್ಪಕಲಾಳ ವಂಚನೆಯನ್ನ ಬಯಲು ಮಾಡಿದ್ದಾರೆ.

ಕನ್ನಡಪರ ಹೋರಾಟಗಾರರಾದ ರಾಮಕೃಷ್ಣ ಮಾತನಾಡಿ, ಚೀಟಿದಾರರಿಗೆ ಧೈರ್ಯ ಹೇಳಿದ ಅವರು, ಬಡ ಕೂಲಿ ಕಾರ್ಮಿಕರು, ಗಾರ್ಮೆಂಟ್ಸ್ ಮಹಿಳೆಯರು, ಗಾರೆ ಕೆಲಸಗಾರರು ತಮ್ಮ ದುಡಿಮೆ ಹಣದೊಂದಿಗೆ ಪುಷ್ಪಕಲಾ ಪರಾರಿಯಾಗಿದ್ದಾರೆ, ಪೊಲೀಸ್ ಠಾಣೆಗೆ ದೂರು ನೀಡಿ ಕಾನೂನು ಕ್ರಮದ ಮೂಲಕ ಬಡವರಿಗೆ ಹಣ ಕೊಡಿಸುವ ಕೆಲಸ ಮಾಡುವುದಾಗಿ ಹೇಳಿದರು.

ನಿವೃತ್ತ ಶಿಕ್ಷಕರಾದ ಗಜೇಂದ್ರ ಮಾತನಾಡಿ, ಕಳೆದ ನಾಲ್ಕು ವರ್ಷದಿಂದ ಪುಷ್ಪಕಲಾ ಶಿಸ್ತಿನಿಂದ ಚೀಟಿ ವ್ಯವಹಾರ ನೆಡೆಸುತ್ತಿದ್ದರು, ಇದೇ ನಂಬಿಕೆ ಮೇಲೆ ನಾನು ಸಹ ನಾಲ್ಕೈದು ಚೀಟಿಗಳ ಹಾಕಿದ್ದೇ, ಚೀಟಿ ಕಂತು ಕಟ್ಟಲು ಪ್ರತಿ ತಿಂಗಳು 1 ಲಕ್ಷಕ್ಕೂ ಹೆಚ್ಚು ಹಣವನ್ನ ಪೋನ್ ಪೇ, ಅಕೌಂಟ್ ಮೂಲಕ ಪಾವತಿ ಮಾಡಿದ್ದೇನೆ, ಆಕೆಯ ವಂಚನೆಯಿAದ ಸುಮಾರು 35 ಲಕ್ಷ ಹಣವನ್ನ ಕಳೆದುಕೊಂಡಿದ್ದೇನೆ. ಇನ್ನೂ ದೊಡ್ಡಬಳ್ಳಾಪುರದಲ್ಲಿ ಅಕ್ರಮ ಚೀಟಿ ದಂಧೆ ನಡೆಯುತ್ತಿದ್ದು ಇವುಗಳಿಗೆ ಕಡಿವಾಣ ಹಾಕಿದ್ದಾಗ ಮಾತ್ರ ಇಂತಹ ವಂಚನೆಗಳನ್ನ ತಡೆಗಟ್ಟ ಬಹುದೆಂದರು.

 ಕೆಲ ವರ್ಷಗಳಿಂದ ಚೀಟಿ ವ್ಯವಹಾರ ನಡೆಸುತ್ತಿದ್ದರು. 2015ರಲ್ಲಿ ಹೊಸ ಚೀಟಿ ಆರಂಭಿಸಿದ್ದರು. ಸುಮಾರು 60 ಮಂದಿ ಪ್ರತಿ ತಿಂಗಳು ಅವರ ಬಳಿ ಚೀಟಿ ಹಣ ಕಟ್ಟುತ್ತಿದ್ದೆವು. ಆದರೆ, ಈ ಬಾರಿ ಅನ್ಯಾಯ ಮಾಡಿದ್ದಾರೆ. ನಾವು ಕೂಲಿ ಮಾಡಿ ಜೀವನ ಸಾಗಿಸುವವರು. ಆದ್ದರಿಂದ ಆರೋಪಿಗಳನ್ನು ಪತ್ತೆ ಮಾಡಿ ತಮ್ಮ ಹಣವನ್ನು ತಮಗೆ ವಾಪಸ್ ಕೊಡಿಸಬೇಕು,” ಎಂದು ಮೋಸ ಹೋದವರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

1 day ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

4 days ago