ಕೊರೋನಾ ವೈರಸ್ ನಿಂದ ದೇಶ ಈಗೀಗ ಚೇತರಿಸಿಕೊಳ್ಳುತ್ತಿರುವ ಸಮಯದಲ್ಲಿ ಮತ್ತೆ ಚೀನಾ ದೇಶದಲ್ಲಿ ಓಮಿಕ್ರಾನ್ ಉಪತಳಿ BF.7 ರೂಪಾಂತರ ತಳಿ ತನ್ನ ಪ್ರಭಾವ ಬೀರುತ್ತಿದೆ.
ಚೀನಾದಲ್ಲಿ ಮತ್ತೆ ಕೊರೊನಾ ಆರ್ಭಟ ಹೆಚ್ಚಾಗಿದೆ, ಓಮಿಕ್ರಾನ್ ಉಪತಳಿ BF 7 ರೂಪಾಂತರ ತಳಿಯಿಂದ ಚೀನಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ, ಇದರಿಂದ ಮುನ್ನೇಚ್ಚರಿಕಾ ಕ್ರಮವಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಬರುವ ಶೇಕಡಾ 2 ರಷ್ಟು ಪ್ರಯಾಣಿಕರ ಸ್ಯಾಂಪಲ್ಸ್ ಗಳ ಸಂಗ್ರಹಣೆ ಮಾಡಿ ತಪಾಸಣೆ ಮತ್ತು ಗಂಟಲು ದ್ರವ ಸಂಗ್ರಹಣೆಯ ಸ್ಯಾಂಪಲ್ಸ್ ಗಳನ್ನ ಲ್ಯಾಬ್ ಗೆ ಕಳಿಸಲಾಗುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಕೆ.ವಿಜೇಂದ್ರ ಮಾಹಿತಿ ನೀಡಿದರು.
ಸ್ಯಾಂಪಲ್ಸ್ ಗಳ ಸಂಗ್ರಹಣೆಗಾಗಿ ಏರ್ ಪೋರ್ಟ್ ನಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮೂರು ಪಾಳಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ, ಒಂದು ಪಾಳಿಯಲ್ಲಿ ಇಬ್ಬರು ಲ್ಯಾಬ್ ಟೆಕ್ನಿಷಿಯನ್ ಒಬ್ಬರು ಡಾಟಾ ಎಂಟ್ರಿ ಆಪರೇಟರ್ ಕೆಲಸ ಮಾಡುತ್ತಿದ್ದಾರೆ.
ರಾಜ್ಯ ಸರ್ಕಾರ ತೆಗೆದುಕೊಳ್ಳುವ ನಿರ್ಧಾರ ಮೇಲೆ ಸ್ಯಾಂಪಲ್ಸ್ ಗಳ ಸಂಗ್ರಹಣೆ ಹೆಚ್ಚು ಮಾಡಲಾಗುವುದು, ಇದಕ್ಕಾಗಿ ಹೆಚ್ಚು ಸಿಬ್ಬಂದಿಗಳ ನೇಮಕ ಸಹ ಮಾಡಲಾಗುವುದು ಸದ್ಯ ಸರ್ಕಾರದ ನಿರ್ದೇಶನಕ್ಕಾಗಿ ಕಾಯಲಾಗುತ್ತಿದೆ ಎಂದರು.
ಡಿಸೆಂಬರ್ 19ಕ್ಕೆ ಭಾರತದಲ್ಲಿ ಸದ್ಯ 378 ಕೋವಿಡ್ ಪ್ರಕರಣಗಳಿವೆ, ಡಿಸೆಂಬರ್ ತಿಂಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 4 ಪ್ರಕರಣ ಪತ್ತೆಯಾಗಿದ್ದು ಸೋಂಕಿತರ ಮೇಲೆ ನಿಗಾ ಇಡಲಾಗಿದೆ ಎಂದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…