ಚೀನಾದಲ್ಲಿ ಮತ್ತೆ ಕೊರೊನಾ ರಣಕೇಕೆ; ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಬರುವ ಶೇಕಡಾ 2 ರಷ್ಟು ಪ್ರಯಾಣಿಕರಿಗೆ ಕೊರೊನಾ ಟೆಸ್ಟ್-ಡಿಹೆಚ್ಒ ಡಾ.ಬಿ.ಕೆ.ರಾಜೇಂದ್ರ

ಕೊರೋನಾ ವೈರಸ್ ನಿಂದ ದೇಶ ಈಗೀಗ ಚೇತರಿಸಿಕೊಳ್ಳುತ್ತಿರುವ ಸಮಯದಲ್ಲಿ ಮತ್ತೆ ಚೀನಾ ದೇಶದಲ್ಲಿ ಓಮಿಕ್ರಾನ್ ಉಪತಳಿ BF.7 ರೂಪಾಂತರ ತಳಿ ತನ್ನ ಪ್ರಭಾವ ಬೀರುತ್ತಿದೆ.

ಚೀನಾದಲ್ಲಿ ಮತ್ತೆ ಕೊರೊನಾ ಆರ್ಭಟ ಹೆಚ್ಚಾಗಿದೆ, ಓಮಿಕ್ರಾನ್ ಉಪತಳಿ BF 7 ರೂಪಾಂತರ ತಳಿಯಿಂದ ಚೀನಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ, ಇದರಿಂದ ಮುನ್ನೇಚ್ಚರಿಕಾ ಕ್ರಮವಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಬರುವ ಶೇಕಡಾ 2 ರಷ್ಟು ಪ್ರಯಾಣಿಕರ ಸ್ಯಾಂಪಲ್ಸ್ ಗಳ ಸಂಗ್ರಹಣೆ ಮಾಡಿ ತಪಾಸಣೆ ಮತ್ತು ಗಂಟಲು ದ್ರವ ಸಂಗ್ರಹಣೆಯ ಸ್ಯಾಂಪಲ್ಸ್ ಗಳನ್ನ ಲ್ಯಾಬ್ ಗೆ ಕಳಿಸಲಾಗುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಕೆ.ವಿಜೇಂದ್ರ ಮಾಹಿತಿ ನೀಡಿದರು.

ಸ್ಯಾಂಪಲ್ಸ್ ಗಳ ಸಂಗ್ರಹಣೆಗಾಗಿ ಏರ್ ಪೋರ್ಟ್ ನಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮೂರು ಪಾಳಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ, ಒಂದು ಪಾಳಿಯಲ್ಲಿ ಇಬ್ಬರು ಲ್ಯಾಬ್ ಟೆಕ್ನಿಷಿಯನ್ ಒಬ್ಬರು ಡಾಟಾ ಎಂಟ್ರಿ ಆಪರೇಟರ್ ಕೆಲಸ ಮಾಡುತ್ತಿದ್ದಾರೆ.

ರಾಜ್ಯ ಸರ್ಕಾರ ತೆಗೆದುಕೊಳ್ಳುವ ನಿರ್ಧಾರ ಮೇಲೆ ಸ್ಯಾಂಪಲ್ಸ್ ಗಳ ಸಂಗ್ರಹಣೆ ಹೆಚ್ಚು ಮಾಡಲಾಗುವುದು, ಇದಕ್ಕಾಗಿ ಹೆಚ್ಚು ಸಿಬ್ಬಂದಿಗಳ ನೇಮಕ ಸಹ ಮಾಡಲಾಗುವುದು ಸದ್ಯ ಸರ್ಕಾರದ ನಿರ್ದೇಶನಕ್ಕಾಗಿ ಕಾಯಲಾಗುತ್ತಿದೆ ಎಂದರು.

ಡಿಸೆಂಬರ್ 19ಕ್ಕೆ ಭಾರತದಲ್ಲಿ ಸದ್ಯ 378 ಕೋವಿಡ್ ಪ್ರಕರಣಗಳಿವೆ, ಡಿಸೆಂಬರ್ ತಿಂಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 4 ಪ್ರಕರಣ ಪತ್ತೆಯಾಗಿದ್ದು ಸೋಂಕಿತರ ಮೇಲೆ ನಿಗಾ ಇಡಲಾಗಿದೆ ಎಂದರು.

Ramesh Babu

Journalist

Recent Posts

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

1 hour ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

3 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

6 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

17 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

18 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

22 hours ago