ಕೊರೋನಾ ವೈರಸ್ ನಿಂದ ದೇಶ ಈಗೀಗ ಚೇತರಿಸಿಕೊಳ್ಳುತ್ತಿರುವ ಸಮಯದಲ್ಲಿ ಮತ್ತೆ ಚೀನಾ ದೇಶದಲ್ಲಿ ಓಮಿಕ್ರಾನ್ ಉಪತಳಿ BF.7 ರೂಪಾಂತರ ತಳಿ ತನ್ನ ಪ್ರಭಾವ ಬೀರುತ್ತಿದೆ.
ಚೀನಾದಲ್ಲಿ ಮತ್ತೆ ಕೊರೊನಾ ಆರ್ಭಟ ಹೆಚ್ಚಾಗಿದೆ, ಓಮಿಕ್ರಾನ್ ಉಪತಳಿ BF 7 ರೂಪಾಂತರ ತಳಿಯಿಂದ ಚೀನಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ, ಇದರಿಂದ ಮುನ್ನೇಚ್ಚರಿಕಾ ಕ್ರಮವಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಬರುವ ಶೇಕಡಾ 2 ರಷ್ಟು ಪ್ರಯಾಣಿಕರ ಸ್ಯಾಂಪಲ್ಸ್ ಗಳ ಸಂಗ್ರಹಣೆ ಮಾಡಿ ತಪಾಸಣೆ ಮತ್ತು ಗಂಟಲು ದ್ರವ ಸಂಗ್ರಹಣೆಯ ಸ್ಯಾಂಪಲ್ಸ್ ಗಳನ್ನ ಲ್ಯಾಬ್ ಗೆ ಕಳಿಸಲಾಗುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಕೆ.ವಿಜೇಂದ್ರ ಮಾಹಿತಿ ನೀಡಿದರು.
ಸ್ಯಾಂಪಲ್ಸ್ ಗಳ ಸಂಗ್ರಹಣೆಗಾಗಿ ಏರ್ ಪೋರ್ಟ್ ನಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮೂರು ಪಾಳಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ, ಒಂದು ಪಾಳಿಯಲ್ಲಿ ಇಬ್ಬರು ಲ್ಯಾಬ್ ಟೆಕ್ನಿಷಿಯನ್ ಒಬ್ಬರು ಡಾಟಾ ಎಂಟ್ರಿ ಆಪರೇಟರ್ ಕೆಲಸ ಮಾಡುತ್ತಿದ್ದಾರೆ.
ರಾಜ್ಯ ಸರ್ಕಾರ ತೆಗೆದುಕೊಳ್ಳುವ ನಿರ್ಧಾರ ಮೇಲೆ ಸ್ಯಾಂಪಲ್ಸ್ ಗಳ ಸಂಗ್ರಹಣೆ ಹೆಚ್ಚು ಮಾಡಲಾಗುವುದು, ಇದಕ್ಕಾಗಿ ಹೆಚ್ಚು ಸಿಬ್ಬಂದಿಗಳ ನೇಮಕ ಸಹ ಮಾಡಲಾಗುವುದು ಸದ್ಯ ಸರ್ಕಾರದ ನಿರ್ದೇಶನಕ್ಕಾಗಿ ಕಾಯಲಾಗುತ್ತಿದೆ ಎಂದರು.
ಡಿಸೆಂಬರ್ 19ಕ್ಕೆ ಭಾರತದಲ್ಲಿ ಸದ್ಯ 378 ಕೋವಿಡ್ ಪ್ರಕರಣಗಳಿವೆ, ಡಿಸೆಂಬರ್ ತಿಂಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 4 ಪ್ರಕರಣ ಪತ್ತೆಯಾಗಿದ್ದು ಸೋಂಕಿತರ ಮೇಲೆ ನಿಗಾ ಇಡಲಾಗಿದೆ ಎಂದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…