ಚೀನಾದ ಉತ್ತರ ಭಾಗದ ಮಕ್ಕಳಲ್ಲಿ ಕಾಣಿಸಿಕೊಂಡ ನ್ಯುಮೋನಿಯಾ ಪ್ರಕರಣಗಳು ರಾಜ್ಯದಲ್ಲಿ ಪಸರಿಸದಂತೆ ತಡೆಯಲು ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಆತಂಕ ಬೇಡ, ಇರಲಿ ಮುನ್ನೆಚ್ಚರಿಕೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಜನರು ವಹಿಸಬೇಕಾದ ಮುನ್ನೆಚ್ಚರಿಕೆಗಳು ಇಲ್ಲಿವೆ
•ಕೆಮ್ಮುವಾಗ, ಶೀನುವಾಗ ಕರವಸ್ತ್ರದಿಂದ ಬಾಯಿ, ಮೂಗೂ ಮುಚ್ಚಿಕೊಳ್ಳಬೇಕು.
• ಆಗಾಗ ಸೋಪಿನಿಂದ ಕೈ ತೊಳೆಯಬೇಕು.
• ಜನಸಂದಣಿ ಇರುವಕಡೆ ಮಾಸ್ಕ್ ಧರಿಸಬೇಕು.
• ಶೀತ-ಜ್ವರ ಬಾಧೆ ಇದ್ದರೆ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ಚಿಕಿತ್ಸೆ ಪಡೆಯಬೇಕು.
• ಎಳೆ ಮಕ್ಕಳು, ವೃದ್ಧರು, ಗರ್ಭಿಣಿಯರು, ಗಂಭೀರ ಸ್ವರೂಪದ ಅನಾರೋಗ್ಯ ಸಮಸ್ಯೆ ಇರುವವರ ಮೇಲೆ ವಿಶೇಷ ಗಮನ ಹರಿಸಬೇಕು.
• ಆರೋಗ್ಯ ಸಿಬ್ಬಂದಿ ಮಾಸ್ಕ್ ಧರಿಸಬೇಕು ಹಾಗೂ ಹಿಂದಿನ ಕೋವಿಡ್ ಮಾರ್ಗಸೂಚಿಗಳನ್ನ ಕಡ್ಡಾಯವಾಗಿ ಪಾಲಿಸಬೇಕು.
ನ್ಯುಮೋನಿಯಾ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಇದು ಶ್ವಾಸಕೋಶದ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. ರೋಗನಿರೋಧಕ ಶಕ್ತಿ ದುರ್ಬಲವಾಗಿರುವ ಮಕ್ಕಳು, ವಯಸ್ಕರು ಅಥವಾ ವೃದ್ಧರು ಈ ರೋಗಕ್ಕೆ ಸುಲಭವಾಗಿ ಬಲಿಯಾಗುತ್ತಾರೆ. ಕೆಮ್ಮು, ಶೀತ, ಜ್ವರ ಮತ್ತು ಎದೆಯಲ್ಲಿ ಕಫದ ಶೇಖರಣೆ ಇದಕ್ಕೆ ಕಾರಣವಾಗಿದೆ. ಈ ಅಪಾಯಕಾರಿ ನ್ಯುಮೋನಿಯಾ ಕಾಯಿಲೆ ಚೀನಾದಲ್ಲಿ ವೇಗವಾಗಿ ಹರಡುತ್ತಿದೆ.
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…