ಚೀನಾದ ಉತ್ತರ ಭಾಗದ ಮಕ್ಕಳಲ್ಲಿ ಕಾಣಿಸಿಕೊಂಡ ನ್ಯುಮೋನಿಯಾ ಪ್ರಕರಣಗಳು ರಾಜ್ಯದಲ್ಲಿ ಪಸರಿಸದಂತೆ ತಡೆಯಲು ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಆತಂಕ ಬೇಡ, ಇರಲಿ ಮುನ್ನೆಚ್ಚರಿಕೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಜನರು ವಹಿಸಬೇಕಾದ ಮುನ್ನೆಚ್ಚರಿಕೆಗಳು ಇಲ್ಲಿವೆ
•ಕೆಮ್ಮುವಾಗ, ಶೀನುವಾಗ ಕರವಸ್ತ್ರದಿಂದ ಬಾಯಿ, ಮೂಗೂ ಮುಚ್ಚಿಕೊಳ್ಳಬೇಕು.
• ಆಗಾಗ ಸೋಪಿನಿಂದ ಕೈ ತೊಳೆಯಬೇಕು.
• ಜನಸಂದಣಿ ಇರುವಕಡೆ ಮಾಸ್ಕ್ ಧರಿಸಬೇಕು.
• ಶೀತ-ಜ್ವರ ಬಾಧೆ ಇದ್ದರೆ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ಚಿಕಿತ್ಸೆ ಪಡೆಯಬೇಕು.
• ಎಳೆ ಮಕ್ಕಳು, ವೃದ್ಧರು, ಗರ್ಭಿಣಿಯರು, ಗಂಭೀರ ಸ್ವರೂಪದ ಅನಾರೋಗ್ಯ ಸಮಸ್ಯೆ ಇರುವವರ ಮೇಲೆ ವಿಶೇಷ ಗಮನ ಹರಿಸಬೇಕು.
• ಆರೋಗ್ಯ ಸಿಬ್ಬಂದಿ ಮಾಸ್ಕ್ ಧರಿಸಬೇಕು ಹಾಗೂ ಹಿಂದಿನ ಕೋವಿಡ್ ಮಾರ್ಗಸೂಚಿಗಳನ್ನ ಕಡ್ಡಾಯವಾಗಿ ಪಾಲಿಸಬೇಕು.
ನ್ಯುಮೋನಿಯಾ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಇದು ಶ್ವಾಸಕೋಶದ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. ರೋಗನಿರೋಧಕ ಶಕ್ತಿ ದುರ್ಬಲವಾಗಿರುವ ಮಕ್ಕಳು, ವಯಸ್ಕರು ಅಥವಾ ವೃದ್ಧರು ಈ ರೋಗಕ್ಕೆ ಸುಲಭವಾಗಿ ಬಲಿಯಾಗುತ್ತಾರೆ. ಕೆಮ್ಮು, ಶೀತ, ಜ್ವರ ಮತ್ತು ಎದೆಯಲ್ಲಿ ಕಫದ ಶೇಖರಣೆ ಇದಕ್ಕೆ ಕಾರಣವಾಗಿದೆ. ಈ ಅಪಾಯಕಾರಿ ನ್ಯುಮೋನಿಯಾ ಕಾಯಿಲೆ ಚೀನಾದಲ್ಲಿ ವೇಗವಾಗಿ ಹರಡುತ್ತಿದೆ.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…