ಚೀನಾದ ಉತ್ತರ ಭಾಗದ ಮಕ್ಕಳಲ್ಲಿ ಕಾಣಿಸಿಕೊಂಡ ನ್ಯುಮೋನಿಯಾ ಪ್ರಕರಣಗಳು ರಾಜ್ಯದಲ್ಲಿ ಪಸರಿಸದಂತೆ ತಡೆಯಲು ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಆತಂಕ ಬೇಡ, ಇರಲಿ ಮುನ್ನೆಚ್ಚರಿಕೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಜನರು ವಹಿಸಬೇಕಾದ ಮುನ್ನೆಚ್ಚರಿಕೆಗಳು ಇಲ್ಲಿವೆ
•ಕೆಮ್ಮುವಾಗ, ಶೀನುವಾಗ ಕರವಸ್ತ್ರದಿಂದ ಬಾಯಿ, ಮೂಗೂ ಮುಚ್ಚಿಕೊಳ್ಳಬೇಕು.
• ಆಗಾಗ ಸೋಪಿನಿಂದ ಕೈ ತೊಳೆಯಬೇಕು.
• ಜನಸಂದಣಿ ಇರುವಕಡೆ ಮಾಸ್ಕ್ ಧರಿಸಬೇಕು.
• ಶೀತ-ಜ್ವರ ಬಾಧೆ ಇದ್ದರೆ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ಚಿಕಿತ್ಸೆ ಪಡೆಯಬೇಕು.
• ಎಳೆ ಮಕ್ಕಳು, ವೃದ್ಧರು, ಗರ್ಭಿಣಿಯರು, ಗಂಭೀರ ಸ್ವರೂಪದ ಅನಾರೋಗ್ಯ ಸಮಸ್ಯೆ ಇರುವವರ ಮೇಲೆ ವಿಶೇಷ ಗಮನ ಹರಿಸಬೇಕು.
• ಆರೋಗ್ಯ ಸಿಬ್ಬಂದಿ ಮಾಸ್ಕ್ ಧರಿಸಬೇಕು ಹಾಗೂ ಹಿಂದಿನ ಕೋವಿಡ್ ಮಾರ್ಗಸೂಚಿಗಳನ್ನ ಕಡ್ಡಾಯವಾಗಿ ಪಾಲಿಸಬೇಕು.
ನ್ಯುಮೋನಿಯಾ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಇದು ಶ್ವಾಸಕೋಶದ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. ರೋಗನಿರೋಧಕ ಶಕ್ತಿ ದುರ್ಬಲವಾಗಿರುವ ಮಕ್ಕಳು, ವಯಸ್ಕರು ಅಥವಾ ವೃದ್ಧರು ಈ ರೋಗಕ್ಕೆ ಸುಲಭವಾಗಿ ಬಲಿಯಾಗುತ್ತಾರೆ. ಕೆಮ್ಮು, ಶೀತ, ಜ್ವರ ಮತ್ತು ಎದೆಯಲ್ಲಿ ಕಫದ ಶೇಖರಣೆ ಇದಕ್ಕೆ ಕಾರಣವಾಗಿದೆ. ಈ ಅಪಾಯಕಾರಿ ನ್ಯುಮೋನಿಯಾ ಕಾಯಿಲೆ ಚೀನಾದಲ್ಲಿ ವೇಗವಾಗಿ ಹರಡುತ್ತಿದೆ.
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…