ಚೀನಾದ ಉತ್ತರ ಭಾಗದ ಮಕ್ಕಳಲ್ಲಿ ಕಾಣಿಸಿಕೊಂಡ ನ್ಯುಮೋನಿಯಾ ಪ್ರಕರಣಗಳು ರಾಜ್ಯದಲ್ಲಿ ಪಸರಿಸದಂತೆ ತಡೆಯಲು ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಆತಂಕ ಬೇಡ, ಇರಲಿ ಮುನ್ನೆಚ್ಚರಿಕೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಜನರು ವಹಿಸಬೇಕಾದ ಮುನ್ನೆಚ್ಚರಿಕೆಗಳು ಇಲ್ಲಿವೆ
•ಕೆಮ್ಮುವಾಗ, ಶೀನುವಾಗ ಕರವಸ್ತ್ರದಿಂದ ಬಾಯಿ, ಮೂಗೂ ಮುಚ್ಚಿಕೊಳ್ಳಬೇಕು.
• ಆಗಾಗ ಸೋಪಿನಿಂದ ಕೈ ತೊಳೆಯಬೇಕು.
• ಜನಸಂದಣಿ ಇರುವಕಡೆ ಮಾಸ್ಕ್ ಧರಿಸಬೇಕು.
• ಶೀತ-ಜ್ವರ ಬಾಧೆ ಇದ್ದರೆ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ಚಿಕಿತ್ಸೆ ಪಡೆಯಬೇಕು.
• ಎಳೆ ಮಕ್ಕಳು, ವೃದ್ಧರು, ಗರ್ಭಿಣಿಯರು, ಗಂಭೀರ ಸ್ವರೂಪದ ಅನಾರೋಗ್ಯ ಸಮಸ್ಯೆ ಇರುವವರ ಮೇಲೆ ವಿಶೇಷ ಗಮನ ಹರಿಸಬೇಕು.
• ಆರೋಗ್ಯ ಸಿಬ್ಬಂದಿ ಮಾಸ್ಕ್ ಧರಿಸಬೇಕು ಹಾಗೂ ಹಿಂದಿನ ಕೋವಿಡ್ ಮಾರ್ಗಸೂಚಿಗಳನ್ನ ಕಡ್ಡಾಯವಾಗಿ ಪಾಲಿಸಬೇಕು.
ನ್ಯುಮೋನಿಯಾ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಇದು ಶ್ವಾಸಕೋಶದ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. ರೋಗನಿರೋಧಕ ಶಕ್ತಿ ದುರ್ಬಲವಾಗಿರುವ ಮಕ್ಕಳು, ವಯಸ್ಕರು ಅಥವಾ ವೃದ್ಧರು ಈ ರೋಗಕ್ಕೆ ಸುಲಭವಾಗಿ ಬಲಿಯಾಗುತ್ತಾರೆ. ಕೆಮ್ಮು, ಶೀತ, ಜ್ವರ ಮತ್ತು ಎದೆಯಲ್ಲಿ ಕಫದ ಶೇಖರಣೆ ಇದಕ್ಕೆ ಕಾರಣವಾಗಿದೆ. ಈ ಅಪಾಯಕಾರಿ ನ್ಯುಮೋನಿಯಾ ಕಾಯಿಲೆ ಚೀನಾದಲ್ಲಿ ವೇಗವಾಗಿ ಹರಡುತ್ತಿದೆ.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…