ಚೀನಾದ ಉತ್ತರ ಭಾಗದ ಮಕ್ಕಳಲ್ಲಿ ಕಾಣಿಸಿಕೊಂಡ ನ್ಯುಮೋನಿಯಾ ಪ್ರಕರಣಗಳು ರಾಜ್ಯದಲ್ಲಿ ಪಸರಿಸದಂತೆ ತಡೆಯಲು ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಆತಂಕ ಬೇಡ, ಇರಲಿ ಮುನ್ನೆಚ್ಚರಿಕೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಜನರು ವಹಿಸಬೇಕಾದ ಮುನ್ನೆಚ್ಚರಿಕೆಗಳು ಇಲ್ಲಿವೆ
•ಕೆಮ್ಮುವಾಗ, ಶೀನುವಾಗ ಕರವಸ್ತ್ರದಿಂದ ಬಾಯಿ, ಮೂಗೂ ಮುಚ್ಚಿಕೊಳ್ಳಬೇಕು.
• ಆಗಾಗ ಸೋಪಿನಿಂದ ಕೈ ತೊಳೆಯಬೇಕು.
• ಜನಸಂದಣಿ ಇರುವಕಡೆ ಮಾಸ್ಕ್ ಧರಿಸಬೇಕು.
• ಶೀತ-ಜ್ವರ ಬಾಧೆ ಇದ್ದರೆ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ಚಿಕಿತ್ಸೆ ಪಡೆಯಬೇಕು.
• ಎಳೆ ಮಕ್ಕಳು, ವೃದ್ಧರು, ಗರ್ಭಿಣಿಯರು, ಗಂಭೀರ ಸ್ವರೂಪದ ಅನಾರೋಗ್ಯ ಸಮಸ್ಯೆ ಇರುವವರ ಮೇಲೆ ವಿಶೇಷ ಗಮನ ಹರಿಸಬೇಕು.
• ಆರೋಗ್ಯ ಸಿಬ್ಬಂದಿ ಮಾಸ್ಕ್ ಧರಿಸಬೇಕು ಹಾಗೂ ಹಿಂದಿನ ಕೋವಿಡ್ ಮಾರ್ಗಸೂಚಿಗಳನ್ನ ಕಡ್ಡಾಯವಾಗಿ ಪಾಲಿಸಬೇಕು.
ನ್ಯುಮೋನಿಯಾ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಇದು ಶ್ವಾಸಕೋಶದ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. ರೋಗನಿರೋಧಕ ಶಕ್ತಿ ದುರ್ಬಲವಾಗಿರುವ ಮಕ್ಕಳು, ವಯಸ್ಕರು ಅಥವಾ ವೃದ್ಧರು ಈ ರೋಗಕ್ಕೆ ಸುಲಭವಾಗಿ ಬಲಿಯಾಗುತ್ತಾರೆ. ಕೆಮ್ಮು, ಶೀತ, ಜ್ವರ ಮತ್ತು ಎದೆಯಲ್ಲಿ ಕಫದ ಶೇಖರಣೆ ಇದಕ್ಕೆ ಕಾರಣವಾಗಿದೆ. ಈ ಅಪಾಯಕಾರಿ ನ್ಯುಮೋನಿಯಾ ಕಾಯಿಲೆ ಚೀನಾದಲ್ಲಿ ವೇಗವಾಗಿ ಹರಡುತ್ತಿದೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…