ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ.
ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24 ರಂದು ಯುವತಿಯ ಶವ ಪತ್ತೆಯಾಗಿತ್ತು. ಮಿಂಕಿ ಶರ್ಮಾ ಎಂಬ ಯುವತಿಯ ಸಾವಿಗೆ ಸಂಬಂಧಿಸಿದಂತೆ ವಿನಯ್ ರಜಪೂತ್ ಎಂಬಾತನನ್ನು ಬಂಧಿಸಲಾಗಿದೆ.
ಯುವತಿ ನಾಪತ್ತೆಯಾಗಿರುವುದಾಗಿ ಕುಟುಂಬಸ್ಥರು ದೂರು ನೀಡಿದ್ದರು. ಪ್ರಮುಖ ರಸ್ತೆಗಳಲ್ಲಿನ ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಪ್ರಕರಣಕ್ಕೆ ಸುಳಿವು ಸಿಕ್ಕಿದೆ. ಸಿಸಿಟಿವಿ ದೃಶ್ಯಾವಳಿಗಳಿಂದ ಯುವತಿಯ ಸ್ಕೂಟರ್ ಅನ್ನು ಆಕೆಯ ಸಹೋದ್ಯೋಗಿ ವಿನಯ್ ಬಳಸಿದ್ದನ್ನು ಪೊಲೀಸರು ಪತ್ತೆಹಚ್ಚಿದ್ದರು.
12 ಗಂಟೆಯೊಳಗೆ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿದ್ದಾರೆ. ಯುವತಿಯೊಂದಿಗೆ ದೀರ್ಘಕಾಲದಿಂದ ಪ್ರೀತಿಸುತ್ತಿದ್ದ ಯುವಕನಿಗೆ ಆಕೆಯ ಮೇಲೆ ಉಂಟಾದ ಅನುಮಾನವೇ ಕೊ*ಲೆಗೆ ಕಾರಣವಾಗಿದೆ.
ಯುವತಿಯನ್ನು ಕಚೇರಿಗೆ ಕರೆಸಿಕೊಂಡು ಇಬ್ಬರ ನಡುವೆ ವಾಗ್ವಾದ ನಡೆದಿದೆ. ವಾಗ್ವಾದದ ವೇಳೆ ಯುವತಿಗೆ ಎಂಟಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿ, ನಂತರ ತಲೆ ಕತ್ತರಿಸಿದ್ದಾಗಿ ವಿನಯ್ ರಜಪೂತ್ ಪೊಲೀಸರಿಗೆ ತಿಳಿಸಿದ್ದಾನೆ.
ಯಮುನಾ ಕಾಲೊನಿಯ ನಿವಾಸಿಯಾಗಿದ್ದ ಅದೇ ಖಾಸಗಿ ಕಂಪನಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿದ್ದ, ಬರ್ಬರವಾಗಿ 25 ವರ್ಷದ ಮಿಂಕಿ ಶರ್ಮಾ ಅವರನ್ನು ಹ*ತ್ಯೆ ಮಾಡಿದ್ದಾನೆ.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…