ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ.
ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24 ರಂದು ಯುವತಿಯ ಶವ ಪತ್ತೆಯಾಗಿತ್ತು. ಮಿಂಕಿ ಶರ್ಮಾ ಎಂಬ ಯುವತಿಯ ಸಾವಿಗೆ ಸಂಬಂಧಿಸಿದಂತೆ ವಿನಯ್ ರಜಪೂತ್ ಎಂಬಾತನನ್ನು ಬಂಧಿಸಲಾಗಿದೆ.
ಯುವತಿ ನಾಪತ್ತೆಯಾಗಿರುವುದಾಗಿ ಕುಟುಂಬಸ್ಥರು ದೂರು ನೀಡಿದ್ದರು. ಪ್ರಮುಖ ರಸ್ತೆಗಳಲ್ಲಿನ ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಪ್ರಕರಣಕ್ಕೆ ಸುಳಿವು ಸಿಕ್ಕಿದೆ. ಸಿಸಿಟಿವಿ ದೃಶ್ಯಾವಳಿಗಳಿಂದ ಯುವತಿಯ ಸ್ಕೂಟರ್ ಅನ್ನು ಆಕೆಯ ಸಹೋದ್ಯೋಗಿ ವಿನಯ್ ಬಳಸಿದ್ದನ್ನು ಪೊಲೀಸರು ಪತ್ತೆಹಚ್ಚಿದ್ದರು.
12 ಗಂಟೆಯೊಳಗೆ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿದ್ದಾರೆ. ಯುವತಿಯೊಂದಿಗೆ ದೀರ್ಘಕಾಲದಿಂದ ಪ್ರೀತಿಸುತ್ತಿದ್ದ ಯುವಕನಿಗೆ ಆಕೆಯ ಮೇಲೆ ಉಂಟಾದ ಅನುಮಾನವೇ ಕೊ*ಲೆಗೆ ಕಾರಣವಾಗಿದೆ.
ಯುವತಿಯನ್ನು ಕಚೇರಿಗೆ ಕರೆಸಿಕೊಂಡು ಇಬ್ಬರ ನಡುವೆ ವಾಗ್ವಾದ ನಡೆದಿದೆ. ವಾಗ್ವಾದದ ವೇಳೆ ಯುವತಿಗೆ ಎಂಟಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿ, ನಂತರ ತಲೆ ಕತ್ತರಿಸಿದ್ದಾಗಿ ವಿನಯ್ ರಜಪೂತ್ ಪೊಲೀಸರಿಗೆ ತಿಳಿಸಿದ್ದಾನೆ.
ಯಮುನಾ ಕಾಲೊನಿಯ ನಿವಾಸಿಯಾಗಿದ್ದ ಅದೇ ಖಾಸಗಿ ಕಂಪನಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿದ್ದ, ಬರ್ಬರವಾಗಿ 25 ವರ್ಷದ ಮಿಂಕಿ ಶರ್ಮಾ ಅವರನ್ನು ಹ*ತ್ಯೆ ಮಾಡಿದ್ದಾನೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…