ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ.
ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24 ರಂದು ಯುವತಿಯ ಶವ ಪತ್ತೆಯಾಗಿತ್ತು. ಮಿಂಕಿ ಶರ್ಮಾ ಎಂಬ ಯುವತಿಯ ಸಾವಿಗೆ ಸಂಬಂಧಿಸಿದಂತೆ ವಿನಯ್ ರಜಪೂತ್ ಎಂಬಾತನನ್ನು ಬಂಧಿಸಲಾಗಿದೆ.
ಯುವತಿ ನಾಪತ್ತೆಯಾಗಿರುವುದಾಗಿ ಕುಟುಂಬಸ್ಥರು ದೂರು ನೀಡಿದ್ದರು. ಪ್ರಮುಖ ರಸ್ತೆಗಳಲ್ಲಿನ ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಪ್ರಕರಣಕ್ಕೆ ಸುಳಿವು ಸಿಕ್ಕಿದೆ. ಸಿಸಿಟಿವಿ ದೃಶ್ಯಾವಳಿಗಳಿಂದ ಯುವತಿಯ ಸ್ಕೂಟರ್ ಅನ್ನು ಆಕೆಯ ಸಹೋದ್ಯೋಗಿ ವಿನಯ್ ಬಳಸಿದ್ದನ್ನು ಪೊಲೀಸರು ಪತ್ತೆಹಚ್ಚಿದ್ದರು.
12 ಗಂಟೆಯೊಳಗೆ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿದ್ದಾರೆ. ಯುವತಿಯೊಂದಿಗೆ ದೀರ್ಘಕಾಲದಿಂದ ಪ್ರೀತಿಸುತ್ತಿದ್ದ ಯುವಕನಿಗೆ ಆಕೆಯ ಮೇಲೆ ಉಂಟಾದ ಅನುಮಾನವೇ ಕೊ*ಲೆಗೆ ಕಾರಣವಾಗಿದೆ.
ಯುವತಿಯನ್ನು ಕಚೇರಿಗೆ ಕರೆಸಿಕೊಂಡು ಇಬ್ಬರ ನಡುವೆ ವಾಗ್ವಾದ ನಡೆದಿದೆ. ವಾಗ್ವಾದದ ವೇಳೆ ಯುವತಿಗೆ ಎಂಟಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿ, ನಂತರ ತಲೆ ಕತ್ತರಿಸಿದ್ದಾಗಿ ವಿನಯ್ ರಜಪೂತ್ ಪೊಲೀಸರಿಗೆ ತಿಳಿಸಿದ್ದಾನೆ.
ಯಮುನಾ ಕಾಲೊನಿಯ ನಿವಾಸಿಯಾಗಿದ್ದ ಅದೇ ಖಾಸಗಿ ಕಂಪನಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿದ್ದ, ಬರ್ಬರವಾಗಿ 25 ವರ್ಷದ ಮಿಂಕಿ ಶರ್ಮಾ ಅವರನ್ನು ಹ*ತ್ಯೆ ಮಾಡಿದ್ದಾನೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…