ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಚುಂಚೇಗೌಡರ 61ನೇ ಜನ್ಮದಿನಾಚರಣೆ ಪ್ರಯುಕ್ತ ಮಧುರೈ ಹೋಬಳಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಾಮಾಜಿಕ ಸೇವೆಗೆ ನಿಷ್ಠೆಯಿಂದ ತಮ್ಮ ಜೀವನವನ್ನು ಸಮರ್ಪಿಸಿದ ಚುಂಚೇಗೌಡರ 61ನೇ ಹುಟ್ಟುಹಬ್ಬವನ್ನು ದೊಡ್ಡಬಳ್ಳಾಪುರದ ಮಧುರೈ ಹೋಬಳಿಯಲ್ಲಿ ಅತ್ಯಂತ ಭಾವುಕ ಹಾಗೂ ಸೇವಾ ಚಟುವಟಿಕೆಗಳ ನಡುವೆ ಆಚರಿಸಲಾಯಿತು ಎಂದು ಚುಂಚೇಗೌಡರ ಅಭಿಮಾನಿಗಳು, ಅನುಯಾಯಿಗಳು ಹೇಳಿದರು.
ಹುಟ್ಟುಹಬ್ಬದ ದಿನವನ್ನು ಸಾಮಾನ್ಯವಾಗಿ ಆಚರಿಸದೇ, ಸಾರ್ವಜನಿಕ ಉಪಯೋಗಕ್ಕೆ ಮೀಸಲಿಟ್ಟು, ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸುವ ಮೂಲಕ ಅವರು ಮತ್ತೊಮ್ಮೆ ತಮ್ಮ ಸೇವಾ ಮನೋಭಾವವನ್ನು ಸಾರಿದ್ದಾರೆ ಎಂದರು.
ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗ್ರಾಮಸ್ಥರು ಈ ಶಿಬಿರಗಳಲ್ಲಿ ಭಾಗವಹಿಸಿದರು.
ಈ ಸಮಾರಂಭದಲ್ಲಿ ಪಾಲ್ಗೊಂಡ ಎಲ್ಲರು ಚುಂಚೇಗೌಡರಿಗೆ ಹೃತ್ಪೂರ್ವಕವಾಗಿ ಶುಭಾಶಯಗಳನ್ನು ಕೋರಿ, ಅವರ ಆರೋಗ್ಯ ಮತ್ತು ಸಮಾಜಮುಖಿ ಕಾರ್ಯಗಳಲ್ಲಿ ಮುಂದುವರಿದ ಯಶಸ್ಸಿಗಾಗಿ ಹಾರೈಸಿದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…