ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ಸಲುವಾಗಿ ಚುನಾವಣೆ ಅಕ್ರಮಗಳನ್ನು ತಡೆಯಲು ಹೆಚ್ಚಿನ ತಪಾಸಣೆ ನಡೆಸಿ ಎಂದು ರಾಜ್ಯ ವಿಶೇಷ ಚುನಾವಣೆ ವೆಚ್ಚ ವೀಕ್ಷಕರಾದ ಮುರಳಿ ಕುಮಾರ್ ಅವರು ಚುನಾವಣಾ ಅಧಿಕಾರಿಗಳಿಗೆ ಸೂಚಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ನ ಸರ್.ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಚುನಾವಣೆ ವೆಚ್ಚ ವೀಕ್ಷಣೆ ಸಂಬಂಧ ಇಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಅವರು ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ದೃಷ್ಟಿಕೋನದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ಅಕ್ರಮ ಮದ್ಯ, ನಗದು ಸಾಗಾಟದ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿ 10 ಲಕ್ಷಕ್ಕೂ ಅಧಿಕ ಮೌಲ್ಯದ ನಗದು ಅಥವಾ ವಸ್ತುಗಳು ಪತ್ತೆಯಾದಲ್ಲಿ ತಕ್ಷಣವೇ ವೆಚ್ಚ ವೀಕ್ಷಕರಿಗೆ ಮಾಹಿತಿ ನೀಡಿ ವರದಿ ಸಲ್ಲಿಸಿ ಎಂದು ಹೇಳಿದರು.
ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನ ವಾದ ಕ್ಷೇತ್ರಗಳಲ್ಲಿ ಮತದಾನ ಕುರಿತು ವಿಶೇಷ ಜಾಗೃತಿ ಮೂಡಿಸಿ. ಅಬಕಾರಿ, ವಾಣಿಜ್ಯ ತೆರಿಗೆ, ಆದಾಯ ತೆರಿಗೆ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸ್ವಯಂ ಪ್ರೇರಿತ ದಾಳಿ, ತಪಾಸಣೆ ನಡೆಸಿ. ಸೂಕ್ತ ಮಾರ್ಗದಲ್ಲಿ ಅಧಿಕಾರಿಗಳ ಸಹಕಾರ, ಸಮನ್ವಯತೆಯಿಂದ ಕೆಲಸ ಮಾಡಿ ಎಂದು ಚುನಾವಣಾಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ದೆಬಾಶಿಶ್ ಮಜುಮ್ ದಾರ್, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಸಹಾಯಕ ಚುನಾವಣಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ, ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಡಿ.ಎಲ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಕರ್ತವ್ಯಕ್ಕೆ ನಿಯೋಜನೆ ಆಗಿರುವ ಚುನಾವಣಾಧಿಕಾರಿಗಳು, ಸಿಬ್ಬಂದಿ, ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…