ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕಾದ ಚುನಾವಣಾ ಆಯೋಗ ಇತ್ತೀಚಿಗೆ ಬಿಜೆಪಿಯ ಅಂಗಸಂಸ್ಥೆಯಂತೆ ವರ್ತಿಸುತ್ತಿದೆ. ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಆಯೋಗ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭಿಸಿದೆ. ಇದು ಬಿಹಾರದಲ್ಲಿ ದೊಡ್ಡ ಸಂಖ್ಯೆಯ ಮತದಾರರನ್ನು ಅವರ ಮತದಾನ ಹಕ್ಕಿನಿಂದ ಕಸಿಯುವ ಹುನ್ನಾರ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಚುನಾವಣಾ ಆಯೋಗದ ಈ ನಿರ್ಧಾರ ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಮಹಾರಾಷ್ಟ್ರ ಚುನಾವಣೆಯಲ್ಲೂ ಆಯೋಗ ಇದೇ ರೀತಿಯಲ್ಲಿ ಅನುಮಾನಾಸ್ಪದ ನಿರ್ಧಾರ ಕೈಗೊಂಡಿತ್ತು. ಕೆಲವೇ ತಿಂಗಳುಗಳ ಅಂತರದಲ್ಲಿ ನಡೆದ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಯ ನಡುವೆ 41 ಲಕ್ಷ ಮತದಾರರು ಇದ್ದಕ್ಕಿದ್ದಂತೆ ಸೇರ್ಪಡೆಯಾಗಿದ್ದರು ಎಂದರು.
ಮಹಾರಾಷ್ಟ್ರದಲ್ಲಿ ಮತದಾರರ ಸಂಖ್ಯೆಯನ್ನು ಭಾರಿ ಸಂಖ್ಯೆಯಲ್ಲಿ ಏರಿಸಿದ್ದ ಚು.ಆಯೋಗ, ಈಗ ಬಿಹಾರದಲ್ಲಿ ಪರಿಷ್ಕರಣೆಯ ನೆಪದಲ್ಲಿ ದೊಡ್ಡ ಸಂಖ್ಯೆಯ ಮತದಾರರ ಹಕ್ಕು ಕಸಿಯಲು ಹೊರಟಿದೆ. ಆಯೋಗದ ಇಂತಹ ಎಡವಟ್ಟು ನಿರ್ಧಾರಗಳು ಯಾರಿಗೆ ಅನುಕೂಲ ಮಾಡಲು ಎಂದು ಬಿಡಿಸಿ ಹೇಳಬೇಕಿಲ್ಲ ಎಂದು ಹೇಳಿದ್ದಾರೆ.
ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಬೇಕಿರುವುದು ಆಯೋಗದ ಜವಾಬ್ಧಾರಿ. ಆದರೆ ಆಯೋಗವೇ ಒಂದು ಪಕ್ಷದ ಅಂಗಸಂಸ್ಥೆಯಂತೆ ಅನ್ಯಾಯದ ಹಾದಿ ತುಳಿದರೆ ಬೇಲಿಯೇ ಎದ್ದು ಹೊಲ ಮೇಯ್ದಂತೆ. ಇನ್ನಾದರೂ ಚು.ಆಯೋಗ ವಿಶ್ವಾಸಾರ್ಹತೆ ಕಾಪಾಡಿಕೊಳ್ಳಲಿ ಎಂದು ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…