ಚುನಾವಣಾ ಆಯೋಗ ಇತ್ತೀಚಿಗೆ ಬಿಜೆಪಿಯ ಅಂಗಸಂಸ್ಥೆಯಂತೆ ವರ್ತಿಸುತ್ತಿದೆ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿ

ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕಾದ ಚುನಾವಣಾ ಆಯೋಗ ಇತ್ತೀಚಿಗೆ ಬಿಜೆಪಿಯ ಅಂಗಸಂಸ್ಥೆಯಂತೆ ವರ್ತಿಸುತ್ತಿದೆ. ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಆಯೋಗ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭಿಸಿದೆ. ಇದು ಬಿಹಾರದಲ್ಲಿ ದೊಡ್ಡ ಸಂಖ್ಯೆಯ ಮತದಾರರನ್ನು ಅವರ ಮತದಾನ ಹಕ್ಕಿನಿಂದ ಕಸಿಯುವ ಹುನ್ನಾರ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ಚುನಾವಣಾ ಆಯೋಗದ ಈ ನಿರ್ಧಾರ ಅನೇಕ ಅನುಮಾನಗಳಿಗೆ ಕಾರಣವಾಗಿದೆ‌. ಮಹಾರಾಷ್ಟ್ರ ಚುನಾವಣೆಯಲ್ಲೂ ಆಯೋಗ ಇದೇ ರೀತಿಯಲ್ಲಿ ಅನುಮಾನಾಸ್ಪದ ನಿರ್ಧಾರ ಕೈಗೊಂಡಿತ್ತು. ಕೆಲವೇ ತಿಂಗಳುಗಳ ಅಂತರದಲ್ಲಿ ನಡೆದ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಯ ನಡುವೆ 41 ಲಕ್ಷ ಮತದಾರರು ಇದ್ದಕ್ಕಿದ್ದಂತೆ ಸೇರ್ಪಡೆಯಾಗಿದ್ದರು ಎಂದರು.

ಮಹಾರಾಷ್ಟ್ರದಲ್ಲಿ ಮತದಾರರ ಸಂಖ್ಯೆಯನ್ನು ಭಾರಿ ಸಂಖ್ಯೆಯಲ್ಲಿ ಏರಿಸಿದ್ದ ಚು.ಆಯೋಗ, ಈಗ ಬಿಹಾರದಲ್ಲಿ ಪರಿಷ್ಕರಣೆಯ ನೆಪದಲ್ಲಿ ದೊಡ್ಡ ಸಂಖ್ಯೆಯ ಮತದಾರರ ಹಕ್ಕು ಕಸಿಯಲು ಹೊರಟಿದೆ‌. ಆಯೋಗದ ಇಂತಹ ಎಡವಟ್ಟು ನಿರ್ಧಾರಗಳು ಯಾರಿಗೆ ಅನುಕೂಲ ಮಾಡಲು ಎಂದು ಬಿಡಿಸಿ ಹೇಳಬೇಕಿಲ್ಲ ಎಂದು ಹೇಳಿದ್ದಾರೆ.

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಬೇಕಿರುವುದು ಆಯೋಗದ ಜವಾಬ್ಧಾರಿ. ಆದರೆ ಆಯೋಗವೇ ಒಂದು ಪಕ್ಷದ ಅಂಗಸಂಸ್ಥೆಯಂತೆ ಅನ್ಯಾಯದ ಹಾದಿ ತುಳಿದರೆ ಬೇಲಿಯೇ ಎದ್ದು ಹೊಲ ಮೇಯ್ದಂತೆ. ಇನ್ನಾದರೂ ಚು.ಆಯೋಗ ವಿಶ್ವಾಸಾರ್ಹತೆ ಕಾಪಾಡಿಕೊಳ್ಳಲಿ ಎಂದು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

29 minutes ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

5 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

9 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

10 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

11 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

21 hours ago