ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕಾದ ಚುನಾವಣಾ ಆಯೋಗ ಇತ್ತೀಚಿಗೆ ಬಿಜೆಪಿಯ ಅಂಗಸಂಸ್ಥೆಯಂತೆ ವರ್ತಿಸುತ್ತಿದೆ. ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಆಯೋಗ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭಿಸಿದೆ. ಇದು ಬಿಹಾರದಲ್ಲಿ ದೊಡ್ಡ ಸಂಖ್ಯೆಯ ಮತದಾರರನ್ನು ಅವರ ಮತದಾನ ಹಕ್ಕಿನಿಂದ ಕಸಿಯುವ ಹುನ್ನಾರ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಚುನಾವಣಾ ಆಯೋಗದ ಈ ನಿರ್ಧಾರ ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಮಹಾರಾಷ್ಟ್ರ ಚುನಾವಣೆಯಲ್ಲೂ ಆಯೋಗ ಇದೇ ರೀತಿಯಲ್ಲಿ ಅನುಮಾನಾಸ್ಪದ ನಿರ್ಧಾರ ಕೈಗೊಂಡಿತ್ತು. ಕೆಲವೇ ತಿಂಗಳುಗಳ ಅಂತರದಲ್ಲಿ ನಡೆದ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಯ ನಡುವೆ 41 ಲಕ್ಷ ಮತದಾರರು ಇದ್ದಕ್ಕಿದ್ದಂತೆ ಸೇರ್ಪಡೆಯಾಗಿದ್ದರು ಎಂದರು.
ಮಹಾರಾಷ್ಟ್ರದಲ್ಲಿ ಮತದಾರರ ಸಂಖ್ಯೆಯನ್ನು ಭಾರಿ ಸಂಖ್ಯೆಯಲ್ಲಿ ಏರಿಸಿದ್ದ ಚು.ಆಯೋಗ, ಈಗ ಬಿಹಾರದಲ್ಲಿ ಪರಿಷ್ಕರಣೆಯ ನೆಪದಲ್ಲಿ ದೊಡ್ಡ ಸಂಖ್ಯೆಯ ಮತದಾರರ ಹಕ್ಕು ಕಸಿಯಲು ಹೊರಟಿದೆ. ಆಯೋಗದ ಇಂತಹ ಎಡವಟ್ಟು ನಿರ್ಧಾರಗಳು ಯಾರಿಗೆ ಅನುಕೂಲ ಮಾಡಲು ಎಂದು ಬಿಡಿಸಿ ಹೇಳಬೇಕಿಲ್ಲ ಎಂದು ಹೇಳಿದ್ದಾರೆ.
ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಬೇಕಿರುವುದು ಆಯೋಗದ ಜವಾಬ್ಧಾರಿ. ಆದರೆ ಆಯೋಗವೇ ಒಂದು ಪಕ್ಷದ ಅಂಗಸಂಸ್ಥೆಯಂತೆ ಅನ್ಯಾಯದ ಹಾದಿ ತುಳಿದರೆ ಬೇಲಿಯೇ ಎದ್ದು ಹೊಲ ಮೇಯ್ದಂತೆ. ಇನ್ನಾದರೂ ಚು.ಆಯೋಗ ವಿಶ್ವಾಸಾರ್ಹತೆ ಕಾಪಾಡಿಕೊಳ್ಳಲಿ ಎಂದು ಮನವಿ ಮಾಡಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…