ಚುನಾವಣೆ ಪ್ರಯುಕ್ತ ನೇಮಕಾತಿಯಾಗಿರುವ ಎಲ್ಲಾ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಚುನಾವಣಾ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯಲ್ಲಿ ಚುನಾವಣಾ ಕಾರ್ಯ ಯಶಸ್ವಿಯಾಗಲು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಎಮ್.ಸಿ.ಸಿ ಅಧ್ಯಕ್ಷರಾದ ಡಾ.ಕೆ.ಎನ್. ಅನುರಾಧ ತಿಳಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ಎಸ್ .ಎಸ್. ಟಿ, ಎಫ್ ಎಸ್ ಟಿ, ವಿ ಎಸ್ ಟಿ ಹಾಗೂ ಸೆಕ್ಟರ್ ಅಧಿಕಾರಿಗಳೊಂದಿಗೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ತಂಡದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಪಡೆದರು. ಚುನಾವಣೆಗೆ ಸಂಬಂಧಿಸಿದಂತೆ ದಾಖಲಾಗುವ ದೂರುಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥ ಪಡಿಸಬೇಕು. ಜನರು ಸ್ವಯಂ ಪ್ರೇರಿತವಾಗಿ ಬಂದು ಮತ ಚಲಾಯಿಸಲು ಎಲ್ಲಾ ಮತಗಟ್ಟೆಗಳಲ್ಲಿ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸಬೇಕು. ತಾಪಮಾನ ಹೆಚ್ಚಾಗಿರುವುದರಿಂದ ಮತಗಟ್ಟೆಗಳಲ್ಲಿ ಮತದಾರರಿಗೆ ನೆರಳಿನ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಹಾಯಕ ಚುನಾವಣಾ ಅಧಿಕಾರಿಗಳಾದ ಶ್ರೀನಿವಾಸ್ ಮಾತನಾಡಿ ತಾಲೂಕಿನಲ್ಲಿ ಚುನಾವಣೆಗೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿ ಪ್ರತಿಶತ ಮತದಾನದ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಮುನಿರಾಜುರವರು ಸ್ವೀಪ್ ಅಡಿಯಲ್ಲಿ ಯುವಕರು, ಮಹಿಳೆಯರು ಹಾಗೂ ಕಾರ್ಮಿಕರು ತಪ್ಪದೇ ಮತ ಚಲಾಯಿಸುವಂತೆ ಮಾಡಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿ ಮತಗಟ್ಟೆಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಎಲ್ಲರೂ ಮತ ಚಲಾಯಿಸುವಂತೆ ಪ್ರೇರೇಪಣೆ ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಪೌರಾಯುಕ್ತರಾದ ಪರಮೇಶ್, ಸಹಾಯಕ ನಿರ್ದೇಶಕರಾದ ಕುಮಾರ್ ಸೇರಿದಂತೆ ಅಧಿಕಾರಿಗಳು ಇದ್ದರು..
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…