ಚುನಾವಣೆ ಪ್ರಯುಕ್ತ ನೇಮಕಾತಿಯಾಗಿರುವ ಎಲ್ಲಾ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಚುನಾವಣಾ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯಲ್ಲಿ ಚುನಾವಣಾ ಕಾರ್ಯ ಯಶಸ್ವಿಯಾಗಲು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಎಮ್.ಸಿ.ಸಿ ಅಧ್ಯಕ್ಷರಾದ ಡಾ.ಕೆ.ಎನ್. ಅನುರಾಧ ತಿಳಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ಎಸ್ .ಎಸ್. ಟಿ, ಎಫ್ ಎಸ್ ಟಿ, ವಿ ಎಸ್ ಟಿ ಹಾಗೂ ಸೆಕ್ಟರ್ ಅಧಿಕಾರಿಗಳೊಂದಿಗೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ತಂಡದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಪಡೆದರು. ಚುನಾವಣೆಗೆ ಸಂಬಂಧಿಸಿದಂತೆ ದಾಖಲಾಗುವ ದೂರುಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥ ಪಡಿಸಬೇಕು. ಜನರು ಸ್ವಯಂ ಪ್ರೇರಿತವಾಗಿ ಬಂದು ಮತ ಚಲಾಯಿಸಲು ಎಲ್ಲಾ ಮತಗಟ್ಟೆಗಳಲ್ಲಿ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸಬೇಕು. ತಾಪಮಾನ ಹೆಚ್ಚಾಗಿರುವುದರಿಂದ ಮತಗಟ್ಟೆಗಳಲ್ಲಿ ಮತದಾರರಿಗೆ ನೆರಳಿನ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಹಾಯಕ ಚುನಾವಣಾ ಅಧಿಕಾರಿಗಳಾದ ಶ್ರೀನಿವಾಸ್ ಮಾತನಾಡಿ ತಾಲೂಕಿನಲ್ಲಿ ಚುನಾವಣೆಗೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿ ಪ್ರತಿಶತ ಮತದಾನದ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಮುನಿರಾಜುರವರು ಸ್ವೀಪ್ ಅಡಿಯಲ್ಲಿ ಯುವಕರು, ಮಹಿಳೆಯರು ಹಾಗೂ ಕಾರ್ಮಿಕರು ತಪ್ಪದೇ ಮತ ಚಲಾಯಿಸುವಂತೆ ಮಾಡಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿ ಮತಗಟ್ಟೆಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಎಲ್ಲರೂ ಮತ ಚಲಾಯಿಸುವಂತೆ ಪ್ರೇರೇಪಣೆ ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಪೌರಾಯುಕ್ತರಾದ ಪರಮೇಶ್, ಸಹಾಯಕ ನಿರ್ದೇಶಕರಾದ ಕುಮಾರ್ ಸೇರಿದಂತೆ ಅಧಿಕಾರಿಗಳು ಇದ್ದರು..
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…