ಚುನಾವಣಾ ಬಹಿಷ್ಕಾರ ಸಹಿ ಸಂಗ್ರಹ ಪತ್ರ ಸಲ್ಲಿಸಲು ಅನುಮತಿ ಅರ್ಜಿಗೆ ಸಹಿ ಹಾಕಲು ಅಧಿಕಾರಿಗಳು ಮೀನಾಮೇಷ: ಅನುಮತಿಗಾಗಿ ಎಸಿ ಕಚೇರಿಯಲ್ಲಿ ಕಾದು ಕುಳಿತ ಗ್ರಾಮಸ್ಥರು: ನಾಳೆ ಬಾ ಎಂದ ಅಧಿಕಾರಿಗಳು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳಚರಂಡಿ ನೀರು, ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ‌ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ಸೇರಿದಂತೆ ಇತರೆ ತ್ಯಾಜ್ಯ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಒಡಲು ಸೇರಿ ಸಂಪೂರ್ಣ ಕಲುಷಿತಗೊಂಡಿವೆ.

ಈ ಕೆರೆಗಳ ನೀರನ್ನು ಬಳಿಸಿದ ಜನ ರೋಗಪೀಡಿತರಾಗುತ್ತಿದ್ದಾರೆ. ಪ್ರಾಣಿ ಪಕ್ಷಿಗಳು, ಜಲಚರಗಳು ಸಾವನ್ನಪ್ಪುತ್ತಿವೆ. ಆದ್ದರಿಂದ ಕೆರೆ ಸಂರಕ್ಷಣೆಗೆ, ಕೆರೆ ಶುದ್ಧೀಕರಣಕ್ಕೆ ಈಗಾಗಲೇ ಹಲವು ಮನವಿ, ಹೋರಾಟ, ಪ್ರತಿಭಟನೆ ಸೇರಿದಂತೆ ನಾನಾ ಪ್ರಯತ್ನ ಮಾಡಿದರೂ ಸಮಸ್ಯೆ ಬಗೆಹರಿಯಲಿಲ್ಲ. ಆದರೆ ಪಟ್ಟು ಬಿಡದೇ ಕೆರೆ ಶುದ್ದೀಕರಣ, ಸಂರಕ್ಷಣೆಗೆ ಹೋರಾಟ ಮುಂದುವರಿಸಿದ ಕೆರೆ ಹೋರಾಟ ಸಮಿತಿ ಮುಖಂಡರು, ಗ್ರಾಮಸ್ಥರು.

ಕೆರೆ ಉಳಿವಿಗಾಗಿ 2023ರ ಸಾರ್ವತ್ರಿಕ ಚುನಾವಣೆ ಬಹಿಷ್ಕರಿಸಲು ತೀರ್ಮಾನಿಸಿರುವ ಗ್ರಾಮಸ್ಥರು, ಈ‌ ಹಿನ್ನೆಲೆ ಈಗಾಗಲೇ ಮತದಾನ ಬಹಿಷ್ಕಾರಕ್ಕೆ ಒಪ್ಪಿ ಸಹಿ ಅಕ್ಕಪಕ್ಕದ ಊರಿನ ಗ್ರಾಮಸ್ಥರು ಸಹಿ ಸಂಗ್ರಹ ಕೂಡ ಮಾಡಲಾಗಿದೆ. ಈ ಸಹಿ ಸಂಗ್ರಹ ಪತ್ರವನ್ನು ಚುನಾವಣಾಧಿಕಾರಿಗೆ ತಲುಪಿಸುವುದೊಂದೆ ಬಾಕಿ.

ಕೆರೆ ಉಳಿವಿಗಾಗಿ ಮತದಾನ ಬಹಿಷ್ಕಾರಿಸುತ್ತಿರುವ ದೊಡ್ಡತುಮಕೂರು ಸುತ್ತಮುತ್ತಲಿನ ಗ್ರಾಮಸ್ಥರು ಏ.28 ರಂದು ಮೆರವಣಿಗೆಯಲ್ಲಿ ತೆರಳಿ ಚುನಾವಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸುವ ಕುರಿತಂತೆ ಅನುಮತಿ ನೀಡುವಂತೆ ಅರ್ಜಿ ನೀಡಲು ಆಗಮಿಸಿದ್ದ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಮುಖಂಡರು ಹಾಗೂ ಅಧಿಕಾರಿಗಳೊಂದಿಗೆ ಮಂಗಳವಾರ ಸಂಜೆ ವಾಗ್ವಾದ ನಡೆಯಿತು.

ಈ ಬಗ್ಗೆ ಮಾಹಿತಿ ನೀಡಿದ ಕೆರೆ ಸಂರಕ್ಷಣಾ ವೇದಿಕೆಯ ಮುಖಂಡರಾದ ಟಿ.ಕೆ.ಹನುಮಂತರಾಜು, ಸತೀಶ್, ವಸಂತ್ ಕುಮಾರ್, ನಮ್ಮ ಹಕ್ಕುಗಳಿಗಾಗಿ ಶಾಂತಿಯುತ ಹೋರಾಟ ಮಾಡುವುದು ಪ್ರಜಾಪ್ರಭುತ್ವ ಆಡಳಿತದಲ್ಲಿ ಕಾನೂನು ಬದ್ಧವಾದ ಹಕ್ಕು. ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಹೋರಾಟ ಮಾಡಲು ಸಹ ಅರ್ಜಿ ಸ್ವೀಕರಿಸದೆ ನಿರಾಕರಿಸುವ ಮೂಲಕ ಅಧಿಕಾರಿಗಳು ಬೇಜವಾಬ್ಧಾರಿತನದಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ನಮ್ಮೂರಿನ ಕೆರೆಯ ನೀರು ಕಲುಷಿತವಾಗಿ ಕುಡಿಯಲು ಸಹ ಶುದ್ಧ ನೀರಿಲ್ಲದೆ ಒಂದು ವರ್ಷದಿಂದಲೂ ಹಲವಾರು ರೀತಿಯ ಹೋರಾಟಗಳನ್ನು ನೆಡೆಸುತ್ತಲೇ ಬರುತ್ತಿದ್ದೇವೆ. ನಮ್ಮ ಒಂದು ಮನವಿಗೂ ಅಧಿಕಾರಿಗಳಿಂದ ಸ್ಪಂದನೆ ಇಲ್ಲವಾಗಿದೆ. ಇಂತಹ ಸ್ಥಿತಿಯಲ್ಲಿ ಮತದಾನ ಬಹಿಷ್ಕಾರವೇ ನಮಗೆ ಉಳಿದಿರುವ ಮಾರ್ಗವಾಗಿದೆ. ಹೀಗಾಗಿ ದೊಡ್ಡತುಮಕೂರು, ಮಜರಾಹೊಸಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈಗಾಗಲೇ ಮತದಾನ ಬಹಿಷ್ಕಾರ ಕುರಿತಂತೆ ಸಹಿ ಸಂಗ್ರಹ ಮಾಡಲಾಗಿದೆ.

ಈ ಮನವಿಯನ್ನು ಏ.28ರ ಬೆಳಗ್ಗೆ 11 ಗಂಟೆಗೆ ನಗರದ ನೆಲದಾಂಜನೇಯಸ್ವಾಮಿ ದೇವಾಲಯದ ಬಳಿಯಿಂದ ಮೆರವಣಿಯಲ್ಲಿ ಬಂದು ತಹಶೀಲ್ದಾರರಿಗೆ ಮನವಿ ಸಲ್ಲಿಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಮರವಣಿಗೆ ನಡೆಸಲು ಅನುಮತಿ ನೀಡುವುದರಲಿ ಕನಿಷ್ಠ ನಮ್ಮ ಅರ್ಜಿಯನ್ನು ಸಹ ಸ್ವೀಕರಿಸದೆ ಇಲ್ಲಿನ ಅಧಿಕಾರಿಗಳು ಕುಂಟು ನೆಪಗಳನ್ನು ಹೇಳುತ್ತಿದ್ದಾರೆ.

ಪೊಲೀಸರ ಮೂಲಕ ಬೆದರಿಸುವ ತಂತ್ರ ಮಾಡುತ್ತಿದ್ದಾರೆ ಎಂದು ದೂರಿದರು. ಅಧಿಕಾರಿಗಳು ಹಾಗೂ ವೇದಿಕೆ ಮುಖಂಡರ ವಾಗ್ವಾದದ ನಂತರ ಅರ್ಜಿಯನ್ನು ಸ್ವೀಕರಿಸಲಾಗಿದೆ. ಆದರೆ ಮೆರವಣಿಗೆ ನಡೆಸಲು ಅಧಿಕೃತಿ ಅನುಮತಿ ನೀಡಿಲ್ಲ.

Ramesh Babu

Journalist

Share
Published by
Ramesh Babu

Recent Posts

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

3 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

5 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

18 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

18 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

19 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

1 day ago