ಚುನಾವಣಾ ಬಹಿಷ್ಕಾರ ಸಹಿ ಸಂಗ್ರಹ ಪತ್ರ ಸಲ್ಲಿಸಲು ಅನುಮತಿ ಅರ್ಜಿಗೆ ಸಹಿ ಹಾಕಲು ಅಧಿಕಾರಿಗಳು ಮೀನಾಮೇಷ: ಅನುಮತಿಗಾಗಿ ಎಸಿ ಕಚೇರಿಯಲ್ಲಿ ಕಾದು ಕುಳಿತ ಗ್ರಾಮಸ್ಥರು: ನಾಳೆ ಬಾ ಎಂದ ಅಧಿಕಾರಿಗಳು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳಚರಂಡಿ ನೀರು, ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ‌ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ಸೇರಿದಂತೆ ಇತರೆ ತ್ಯಾಜ್ಯ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಒಡಲು ಸೇರಿ ಸಂಪೂರ್ಣ ಕಲುಷಿತಗೊಂಡಿವೆ.

ಈ ಕೆರೆಗಳ ನೀರನ್ನು ಬಳಿಸಿದ ಜನ ರೋಗಪೀಡಿತರಾಗುತ್ತಿದ್ದಾರೆ. ಪ್ರಾಣಿ ಪಕ್ಷಿಗಳು, ಜಲಚರಗಳು ಸಾವನ್ನಪ್ಪುತ್ತಿವೆ. ಆದ್ದರಿಂದ ಕೆರೆ ಸಂರಕ್ಷಣೆಗೆ, ಕೆರೆ ಶುದ್ಧೀಕರಣಕ್ಕೆ ಈಗಾಗಲೇ ಹಲವು ಮನವಿ, ಹೋರಾಟ, ಪ್ರತಿಭಟನೆ ಸೇರಿದಂತೆ ನಾನಾ ಪ್ರಯತ್ನ ಮಾಡಿದರೂ ಸಮಸ್ಯೆ ಬಗೆಹರಿಯಲಿಲ್ಲ. ಆದರೆ ಪಟ್ಟು ಬಿಡದೇ ಕೆರೆ ಶುದ್ದೀಕರಣ, ಸಂರಕ್ಷಣೆಗೆ ಹೋರಾಟ ಮುಂದುವರಿಸಿದ ಕೆರೆ ಹೋರಾಟ ಸಮಿತಿ ಮುಖಂಡರು, ಗ್ರಾಮಸ್ಥರು.

ಕೆರೆ ಉಳಿವಿಗಾಗಿ 2023ರ ಸಾರ್ವತ್ರಿಕ ಚುನಾವಣೆ ಬಹಿಷ್ಕರಿಸಲು ತೀರ್ಮಾನಿಸಿರುವ ಗ್ರಾಮಸ್ಥರು, ಈ‌ ಹಿನ್ನೆಲೆ ಈಗಾಗಲೇ ಮತದಾನ ಬಹಿಷ್ಕಾರಕ್ಕೆ ಒಪ್ಪಿ ಸಹಿ ಅಕ್ಕಪಕ್ಕದ ಊರಿನ ಗ್ರಾಮಸ್ಥರು ಸಹಿ ಸಂಗ್ರಹ ಕೂಡ ಮಾಡಲಾಗಿದೆ. ಈ ಸಹಿ ಸಂಗ್ರಹ ಪತ್ರವನ್ನು ಚುನಾವಣಾಧಿಕಾರಿಗೆ ತಲುಪಿಸುವುದೊಂದೆ ಬಾಕಿ.

ಕೆರೆ ಉಳಿವಿಗಾಗಿ ಮತದಾನ ಬಹಿಷ್ಕಾರಿಸುತ್ತಿರುವ ದೊಡ್ಡತುಮಕೂರು ಸುತ್ತಮುತ್ತಲಿನ ಗ್ರಾಮಸ್ಥರು ಏ.28 ರಂದು ಮೆರವಣಿಗೆಯಲ್ಲಿ ತೆರಳಿ ಚುನಾವಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸುವ ಕುರಿತಂತೆ ಅನುಮತಿ ನೀಡುವಂತೆ ಅರ್ಜಿ ನೀಡಲು ಆಗಮಿಸಿದ್ದ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಮುಖಂಡರು ಹಾಗೂ ಅಧಿಕಾರಿಗಳೊಂದಿಗೆ ಮಂಗಳವಾರ ಸಂಜೆ ವಾಗ್ವಾದ ನಡೆಯಿತು.

ಈ ಬಗ್ಗೆ ಮಾಹಿತಿ ನೀಡಿದ ಕೆರೆ ಸಂರಕ್ಷಣಾ ವೇದಿಕೆಯ ಮುಖಂಡರಾದ ಟಿ.ಕೆ.ಹನುಮಂತರಾಜು, ಸತೀಶ್, ವಸಂತ್ ಕುಮಾರ್, ನಮ್ಮ ಹಕ್ಕುಗಳಿಗಾಗಿ ಶಾಂತಿಯುತ ಹೋರಾಟ ಮಾಡುವುದು ಪ್ರಜಾಪ್ರಭುತ್ವ ಆಡಳಿತದಲ್ಲಿ ಕಾನೂನು ಬದ್ಧವಾದ ಹಕ್ಕು. ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಹೋರಾಟ ಮಾಡಲು ಸಹ ಅರ್ಜಿ ಸ್ವೀಕರಿಸದೆ ನಿರಾಕರಿಸುವ ಮೂಲಕ ಅಧಿಕಾರಿಗಳು ಬೇಜವಾಬ್ಧಾರಿತನದಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ನಮ್ಮೂರಿನ ಕೆರೆಯ ನೀರು ಕಲುಷಿತವಾಗಿ ಕುಡಿಯಲು ಸಹ ಶುದ್ಧ ನೀರಿಲ್ಲದೆ ಒಂದು ವರ್ಷದಿಂದಲೂ ಹಲವಾರು ರೀತಿಯ ಹೋರಾಟಗಳನ್ನು ನೆಡೆಸುತ್ತಲೇ ಬರುತ್ತಿದ್ದೇವೆ. ನಮ್ಮ ಒಂದು ಮನವಿಗೂ ಅಧಿಕಾರಿಗಳಿಂದ ಸ್ಪಂದನೆ ಇಲ್ಲವಾಗಿದೆ. ಇಂತಹ ಸ್ಥಿತಿಯಲ್ಲಿ ಮತದಾನ ಬಹಿಷ್ಕಾರವೇ ನಮಗೆ ಉಳಿದಿರುವ ಮಾರ್ಗವಾಗಿದೆ. ಹೀಗಾಗಿ ದೊಡ್ಡತುಮಕೂರು, ಮಜರಾಹೊಸಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈಗಾಗಲೇ ಮತದಾನ ಬಹಿಷ್ಕಾರ ಕುರಿತಂತೆ ಸಹಿ ಸಂಗ್ರಹ ಮಾಡಲಾಗಿದೆ.

ಈ ಮನವಿಯನ್ನು ಏ.28ರ ಬೆಳಗ್ಗೆ 11 ಗಂಟೆಗೆ ನಗರದ ನೆಲದಾಂಜನೇಯಸ್ವಾಮಿ ದೇವಾಲಯದ ಬಳಿಯಿಂದ ಮೆರವಣಿಯಲ್ಲಿ ಬಂದು ತಹಶೀಲ್ದಾರರಿಗೆ ಮನವಿ ಸಲ್ಲಿಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಮರವಣಿಗೆ ನಡೆಸಲು ಅನುಮತಿ ನೀಡುವುದರಲಿ ಕನಿಷ್ಠ ನಮ್ಮ ಅರ್ಜಿಯನ್ನು ಸಹ ಸ್ವೀಕರಿಸದೆ ಇಲ್ಲಿನ ಅಧಿಕಾರಿಗಳು ಕುಂಟು ನೆಪಗಳನ್ನು ಹೇಳುತ್ತಿದ್ದಾರೆ.

ಪೊಲೀಸರ ಮೂಲಕ ಬೆದರಿಸುವ ತಂತ್ರ ಮಾಡುತ್ತಿದ್ದಾರೆ ಎಂದು ದೂರಿದರು. ಅಧಿಕಾರಿಗಳು ಹಾಗೂ ವೇದಿಕೆ ಮುಖಂಡರ ವಾಗ್ವಾದದ ನಂತರ ಅರ್ಜಿಯನ್ನು ಸ್ವೀಕರಿಸಲಾಗಿದೆ. ಆದರೆ ಮೆರವಣಿಗೆ ನಡೆಸಲು ಅಧಿಕೃತಿ ಅನುಮತಿ ನೀಡಿಲ್ಲ.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

6 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

7 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

13 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

14 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

19 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago