ಚುನಾವಣಾ ಬಹಿಷ್ಕಾರ ಸಹಿ ಸಂಗ್ರಹ ಪತ್ರ ಸಲ್ಲಿಸಲು ಅನುಮತಿ ಅರ್ಜಿಗೆ ಸಹಿ ಹಾಕಲು ಅಧಿಕಾರಿಗಳು ಮೀನಾಮೇಷ: ಅನುಮತಿಗಾಗಿ ಎಸಿ ಕಚೇರಿಯಲ್ಲಿ ಕಾದು ಕುಳಿತ ಗ್ರಾಮಸ್ಥರು: ನಾಳೆ ಬಾ ಎಂದ ಅಧಿಕಾರಿಗಳು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳಚರಂಡಿ ನೀರು, ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ‌ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ಸೇರಿದಂತೆ ಇತರೆ ತ್ಯಾಜ್ಯ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಒಡಲು ಸೇರಿ ಸಂಪೂರ್ಣ ಕಲುಷಿತಗೊಂಡಿವೆ.

ಈ ಕೆರೆಗಳ ನೀರನ್ನು ಬಳಿಸಿದ ಜನ ರೋಗಪೀಡಿತರಾಗುತ್ತಿದ್ದಾರೆ. ಪ್ರಾಣಿ ಪಕ್ಷಿಗಳು, ಜಲಚರಗಳು ಸಾವನ್ನಪ್ಪುತ್ತಿವೆ. ಆದ್ದರಿಂದ ಕೆರೆ ಸಂರಕ್ಷಣೆಗೆ, ಕೆರೆ ಶುದ್ಧೀಕರಣಕ್ಕೆ ಈಗಾಗಲೇ ಹಲವು ಮನವಿ, ಹೋರಾಟ, ಪ್ರತಿಭಟನೆ ಸೇರಿದಂತೆ ನಾನಾ ಪ್ರಯತ್ನ ಮಾಡಿದರೂ ಸಮಸ್ಯೆ ಬಗೆಹರಿಯಲಿಲ್ಲ. ಆದರೆ ಪಟ್ಟು ಬಿಡದೇ ಕೆರೆ ಶುದ್ದೀಕರಣ, ಸಂರಕ್ಷಣೆಗೆ ಹೋರಾಟ ಮುಂದುವರಿಸಿದ ಕೆರೆ ಹೋರಾಟ ಸಮಿತಿ ಮುಖಂಡರು, ಗ್ರಾಮಸ್ಥರು.

ಕೆರೆ ಉಳಿವಿಗಾಗಿ 2023ರ ಸಾರ್ವತ್ರಿಕ ಚುನಾವಣೆ ಬಹಿಷ್ಕರಿಸಲು ತೀರ್ಮಾನಿಸಿರುವ ಗ್ರಾಮಸ್ಥರು, ಈ‌ ಹಿನ್ನೆಲೆ ಈಗಾಗಲೇ ಮತದಾನ ಬಹಿಷ್ಕಾರಕ್ಕೆ ಒಪ್ಪಿ ಸಹಿ ಅಕ್ಕಪಕ್ಕದ ಊರಿನ ಗ್ರಾಮಸ್ಥರು ಸಹಿ ಸಂಗ್ರಹ ಕೂಡ ಮಾಡಲಾಗಿದೆ. ಈ ಸಹಿ ಸಂಗ್ರಹ ಪತ್ರವನ್ನು ಚುನಾವಣಾಧಿಕಾರಿಗೆ ತಲುಪಿಸುವುದೊಂದೆ ಬಾಕಿ.

ಕೆರೆ ಉಳಿವಿಗಾಗಿ ಮತದಾನ ಬಹಿಷ್ಕಾರಿಸುತ್ತಿರುವ ದೊಡ್ಡತುಮಕೂರು ಸುತ್ತಮುತ್ತಲಿನ ಗ್ರಾಮಸ್ಥರು ಏ.28 ರಂದು ಮೆರವಣಿಗೆಯಲ್ಲಿ ತೆರಳಿ ಚುನಾವಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸುವ ಕುರಿತಂತೆ ಅನುಮತಿ ನೀಡುವಂತೆ ಅರ್ಜಿ ನೀಡಲು ಆಗಮಿಸಿದ್ದ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಮುಖಂಡರು ಹಾಗೂ ಅಧಿಕಾರಿಗಳೊಂದಿಗೆ ಮಂಗಳವಾರ ಸಂಜೆ ವಾಗ್ವಾದ ನಡೆಯಿತು.

ಈ ಬಗ್ಗೆ ಮಾಹಿತಿ ನೀಡಿದ ಕೆರೆ ಸಂರಕ್ಷಣಾ ವೇದಿಕೆಯ ಮುಖಂಡರಾದ ಟಿ.ಕೆ.ಹನುಮಂತರಾಜು, ಸತೀಶ್, ವಸಂತ್ ಕುಮಾರ್, ನಮ್ಮ ಹಕ್ಕುಗಳಿಗಾಗಿ ಶಾಂತಿಯುತ ಹೋರಾಟ ಮಾಡುವುದು ಪ್ರಜಾಪ್ರಭುತ್ವ ಆಡಳಿತದಲ್ಲಿ ಕಾನೂನು ಬದ್ಧವಾದ ಹಕ್ಕು. ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಹೋರಾಟ ಮಾಡಲು ಸಹ ಅರ್ಜಿ ಸ್ವೀಕರಿಸದೆ ನಿರಾಕರಿಸುವ ಮೂಲಕ ಅಧಿಕಾರಿಗಳು ಬೇಜವಾಬ್ಧಾರಿತನದಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ನಮ್ಮೂರಿನ ಕೆರೆಯ ನೀರು ಕಲುಷಿತವಾಗಿ ಕುಡಿಯಲು ಸಹ ಶುದ್ಧ ನೀರಿಲ್ಲದೆ ಒಂದು ವರ್ಷದಿಂದಲೂ ಹಲವಾರು ರೀತಿಯ ಹೋರಾಟಗಳನ್ನು ನೆಡೆಸುತ್ತಲೇ ಬರುತ್ತಿದ್ದೇವೆ. ನಮ್ಮ ಒಂದು ಮನವಿಗೂ ಅಧಿಕಾರಿಗಳಿಂದ ಸ್ಪಂದನೆ ಇಲ್ಲವಾಗಿದೆ. ಇಂತಹ ಸ್ಥಿತಿಯಲ್ಲಿ ಮತದಾನ ಬಹಿಷ್ಕಾರವೇ ನಮಗೆ ಉಳಿದಿರುವ ಮಾರ್ಗವಾಗಿದೆ. ಹೀಗಾಗಿ ದೊಡ್ಡತುಮಕೂರು, ಮಜರಾಹೊಸಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈಗಾಗಲೇ ಮತದಾನ ಬಹಿಷ್ಕಾರ ಕುರಿತಂತೆ ಸಹಿ ಸಂಗ್ರಹ ಮಾಡಲಾಗಿದೆ.

ಈ ಮನವಿಯನ್ನು ಏ.28ರ ಬೆಳಗ್ಗೆ 11 ಗಂಟೆಗೆ ನಗರದ ನೆಲದಾಂಜನೇಯಸ್ವಾಮಿ ದೇವಾಲಯದ ಬಳಿಯಿಂದ ಮೆರವಣಿಯಲ್ಲಿ ಬಂದು ತಹಶೀಲ್ದಾರರಿಗೆ ಮನವಿ ಸಲ್ಲಿಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಮರವಣಿಗೆ ನಡೆಸಲು ಅನುಮತಿ ನೀಡುವುದರಲಿ ಕನಿಷ್ಠ ನಮ್ಮ ಅರ್ಜಿಯನ್ನು ಸಹ ಸ್ವೀಕರಿಸದೆ ಇಲ್ಲಿನ ಅಧಿಕಾರಿಗಳು ಕುಂಟು ನೆಪಗಳನ್ನು ಹೇಳುತ್ತಿದ್ದಾರೆ.

ಪೊಲೀಸರ ಮೂಲಕ ಬೆದರಿಸುವ ತಂತ್ರ ಮಾಡುತ್ತಿದ್ದಾರೆ ಎಂದು ದೂರಿದರು. ಅಧಿಕಾರಿಗಳು ಹಾಗೂ ವೇದಿಕೆ ಮುಖಂಡರ ವಾಗ್ವಾದದ ನಂತರ ಅರ್ಜಿಯನ್ನು ಸ್ವೀಕರಿಸಲಾಗಿದೆ. ಆದರೆ ಮೆರವಣಿಗೆ ನಡೆಸಲು ಅಧಿಕೃತಿ ಅನುಮತಿ ನೀಡಿಲ್ಲ.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

6 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago