ರಾಜಕೀಯ ಪಕ್ಷಗಳಿಂದ ಅಭ್ಯರ್ಥಿಗಳ ಪಟ್ಟಿ ಹಂತ ಹಂತವಾಗಿ ಬಿಡುಗಡೆಯಾಗುತ್ತಿದ್ದಂತೆ ಅಭ್ಯರ್ಥಿಗಳ ಚುನಾವಣಾ ಖರ್ಚು – ವೆಚ್ಚಗಳ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣು ನೆಟ್ಟಿದೆ.
ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ಕಠಿಣವಾಗಿ ಪರಿಶೀಲನೆ ಮಾಡುತ್ತಿರುವ ಆಯೋಗ ಅಭ್ಯರ್ಥಿಗಳಿಗೆ ಖಡಕ್ ಎಚ್ಚರಿಕೆ ನೀಡಿದೆ. ಚುನಾವಣಾ ಆಯೋಗ ವೀಕ್ಷಕ ಅತುಲ್ ಪಾಂಡೆ ಕ್ಷೇತ್ರದ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು, ಚುನಾವಣಾ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.
ಪ್ರತಿಯೊಬ್ಬ ಅಭ್ಯರ್ಥಿಗಳ ವೆಚ್ಚಗಳ ಮೇಲೆ ಹದ್ದಿನ ಕಣ್ಣಿಡಲು ನೀತಿ ಸಂಹಿತೆ ಜಾರಿ ತಂಡಗಳಿಗೆ ಸೂಚಿಸಿದರು. ಈ ವೇಳೆ ಚುನಾವಣಾ ಸಿದ್ಧತೆ, ರಾಜಕೀಯ ಪಕ್ಷಗಳ ಮತ್ತು ಅಭ್ಯರ್ಥಿಗಳ ವೆಚ್ಚದ ಲೆಕ್ಕ ಪರಿಶೀಲನೆ ಸಂಬಂಧವಾಗಿ ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಮೋಹನಕುಮಾರಿ ಮಾಹಿತಿ ನೀಡಿದರು.
36 ಪ್ರಕರಣ, 28 ಲಕ್ಷ ಹಣ ಜಪ್ತಿ:
ನೀತಿ ಸಂಹಿತೆ ಜಾರಿಯಾದ ದಿನದಿಂದ ಇಲ್ಲಿಯವರೆಗೆ ತಾಲೂಕಿನಲ್ಲಿ ಒಟ್ಟು 36 ಪ್ರಕರಣಗಳು ದಾಖಲಾಗಿದೆ. ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಒಟ್ಟು ರೂ.327500. ಮತ್ತು ಚುನಾವಣಾ ಸಾಮಗ್ರಿ, ಮದ್ಯ ಇತ್ಯಾದಿಗಳ ಒಟ್ಟು ರೂ.24,80,749. ಮೊತ್ತದ ಸಾಮಗ್ರಿ ವಶಕ್ಕೆ ಪಡೆಯಲಾಗಿದೆ ಎಂದು ಎಂ.ಸಿ.ಸಿ ನೋಡಲ್ ಅಧಿಕಾರಿ ಶ್ರೀನಾಥಗೌಡ ಮಾಹಿತಿ ನೀಡಿದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…