ಚುನಾವಣಾ ವೆಚ್ಚಗಳ ಮೇಲೆ ಹದ್ದಿನ ಕಣ್ಣು: ಕ್ಷೇತ್ರಕ್ಕೆ ಚುನಾವಣಾ ಆಯೋಗದ ವೆಚ್ಚ ವೀಕ್ಷಕ ಅತುಲ್ ಪಾಂಡೆ ಭೇಟಿ, ಪರಿಶೀಲನೆ

ರಾಜಕೀಯ ಪಕ್ಷಗಳಿಂದ ಅಭ್ಯರ್ಥಿಗಳ ಪಟ್ಟಿ ಹಂತ ಹಂತವಾಗಿ ಬಿಡುಗಡೆಯಾಗುತ್ತಿದ್ದಂತೆ ಅಭ್ಯರ್ಥಿಗಳ ಚುನಾವಣಾ ಖರ್ಚು – ವೆಚ್ಚಗಳ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣು ನೆಟ್ಟಿದೆ.

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ಕಠಿಣವಾಗಿ ಪರಿಶೀಲನೆ ಮಾಡುತ್ತಿರುವ ಆಯೋಗ ಅಭ್ಯರ್ಥಿಗಳಿಗೆ ಖಡಕ್ ಎಚ್ಚರಿಕೆ ನೀಡಿದೆ. ಚುನಾವಣಾ ಆಯೋಗ ವೀಕ್ಷಕ ಅತುಲ್ ಪಾಂಡೆ ಕ್ಷೇತ್ರದ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು, ಚುನಾವಣಾ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.

ತಾಲ್ಲೂಕಿನ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಚೆಕ್ ಪೋಸ್ಟ್ ಗಳು, ಫ್ಲೈಯಿಂಗ್ ಸ್ಕ್ವಾಡ್ ಗಳ ಕಾರ್ಯ ನಿರ್ವಹಣೆ ಕುರಿತು ಮಾಹಿತಿ ಪಡೆದರು. ಬಳಿಕ ಚೆಕ್ ಪೋಸ್ಟ್ ಗಳ ಬಳಿಗೆ ತೆರಳಿ ಖುದ್ದು ತಪಾಸಣೆ ನಡೆಸಿದರು. ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿಧಾನಸಭಾ ಚುನಾವಣೆ ಶಾಂತಿಯುತ ಮತ್ತು ನ್ಯಾಯ ಸಮ್ಮತವಾಗಿ ನಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಪ್ರತಿಯೊಬ್ಬ ಅಭ್ಯರ್ಥಿಗಳ ವೆಚ್ಚಗಳ ಮೇಲೆ ಹದ್ದಿನ ಕಣ್ಣಿಡಲು ನೀತಿ ಸಂಹಿತೆ ಜಾರಿ ತಂಡಗಳಿಗೆ ಸೂಚಿಸಿದರು. ಈ ವೇಳೆ ಚುನಾವಣಾ ಸಿದ್ಧತೆ, ರಾಜಕೀಯ ಪಕ್ಷಗಳ ಮತ್ತು ಅಭ್ಯರ್ಥಿಗಳ ವೆಚ್ಚದ ಲೆಕ್ಕ ಪರಿಶೀಲನೆ ಸಂಬಂಧವಾಗಿ ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಮೋಹನಕುಮಾರಿ ಮಾಹಿತಿ ನೀಡಿದರು.

36 ಪ್ರಕರಣ, 28 ಲಕ್ಷ ಹಣ ಜಪ್ತಿ:

ನೀತಿ ಸಂಹಿತೆ ಜಾರಿಯಾದ ದಿನದಿಂದ ಇಲ್ಲಿಯವರೆಗೆ ತಾಲೂಕಿನಲ್ಲಿ ಒಟ್ಟು 36 ಪ್ರಕರಣಗಳು ದಾಖಲಾಗಿದೆ. ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಒಟ್ಟು ರೂ.327500. ಮತ್ತು ಚುನಾವಣಾ ಸಾಮಗ್ರಿ, ಮದ್ಯ ಇತ್ಯಾದಿಗಳ ಒಟ್ಟು ರೂ.24,80,749. ಮೊತ್ತದ ಸಾಮಗ್ರಿ ವಶಕ್ಕೆ ಪಡೆಯಲಾಗಿದೆ ಎಂದು ಎಂ.ಸಿ.ಸಿ ನೋಡಲ್ ಅಧಿಕಾರಿ ಶ್ರೀನಾಥಗೌಡ ಮಾಹಿತಿ ನೀಡಿದರು.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

46 minutes ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

59 minutes ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

14 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

14 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

17 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago