ರಾಜಕೀಯ ಪಕ್ಷಗಳಿಂದ ಅಭ್ಯರ್ಥಿಗಳ ಪಟ್ಟಿ ಹಂತ ಹಂತವಾಗಿ ಬಿಡುಗಡೆಯಾಗುತ್ತಿದ್ದಂತೆ ಅಭ್ಯರ್ಥಿಗಳ ಚುನಾವಣಾ ಖರ್ಚು – ವೆಚ್ಚಗಳ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣು ನೆಟ್ಟಿದೆ.
ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ಕಠಿಣವಾಗಿ ಪರಿಶೀಲನೆ ಮಾಡುತ್ತಿರುವ ಆಯೋಗ ಅಭ್ಯರ್ಥಿಗಳಿಗೆ ಖಡಕ್ ಎಚ್ಚರಿಕೆ ನೀಡಿದೆ. ಚುನಾವಣಾ ಆಯೋಗ ವೀಕ್ಷಕ ಅತುಲ್ ಪಾಂಡೆ ಕ್ಷೇತ್ರದ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು, ಚುನಾವಣಾ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.
ಪ್ರತಿಯೊಬ್ಬ ಅಭ್ಯರ್ಥಿಗಳ ವೆಚ್ಚಗಳ ಮೇಲೆ ಹದ್ದಿನ ಕಣ್ಣಿಡಲು ನೀತಿ ಸಂಹಿತೆ ಜಾರಿ ತಂಡಗಳಿಗೆ ಸೂಚಿಸಿದರು. ಈ ವೇಳೆ ಚುನಾವಣಾ ಸಿದ್ಧತೆ, ರಾಜಕೀಯ ಪಕ್ಷಗಳ ಮತ್ತು ಅಭ್ಯರ್ಥಿಗಳ ವೆಚ್ಚದ ಲೆಕ್ಕ ಪರಿಶೀಲನೆ ಸಂಬಂಧವಾಗಿ ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಮೋಹನಕುಮಾರಿ ಮಾಹಿತಿ ನೀಡಿದರು.
36 ಪ್ರಕರಣ, 28 ಲಕ್ಷ ಹಣ ಜಪ್ತಿ:
ನೀತಿ ಸಂಹಿತೆ ಜಾರಿಯಾದ ದಿನದಿಂದ ಇಲ್ಲಿಯವರೆಗೆ ತಾಲೂಕಿನಲ್ಲಿ ಒಟ್ಟು 36 ಪ್ರಕರಣಗಳು ದಾಖಲಾಗಿದೆ. ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಒಟ್ಟು ರೂ.327500. ಮತ್ತು ಚುನಾವಣಾ ಸಾಮಗ್ರಿ, ಮದ್ಯ ಇತ್ಯಾದಿಗಳ ಒಟ್ಟು ರೂ.24,80,749. ಮೊತ್ತದ ಸಾಮಗ್ರಿ ವಶಕ್ಕೆ ಪಡೆಯಲಾಗಿದೆ ಎಂದು ಎಂ.ಸಿ.ಸಿ ನೋಡಲ್ ಅಧಿಕಾರಿ ಶ್ರೀನಾಥಗೌಡ ಮಾಹಿತಿ ನೀಡಿದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…