ರಾಜಕೀಯ ಪಕ್ಷಗಳಿಂದ ಅಭ್ಯರ್ಥಿಗಳ ಪಟ್ಟಿ ಹಂತ ಹಂತವಾಗಿ ಬಿಡುಗಡೆಯಾಗುತ್ತಿದ್ದಂತೆ ಅಭ್ಯರ್ಥಿಗಳ ಚುನಾವಣಾ ಖರ್ಚು – ವೆಚ್ಚಗಳ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣು ನೆಟ್ಟಿದೆ.
ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ಕಠಿಣವಾಗಿ ಪರಿಶೀಲನೆ ಮಾಡುತ್ತಿರುವ ಆಯೋಗ ಅಭ್ಯರ್ಥಿಗಳಿಗೆ ಖಡಕ್ ಎಚ್ಚರಿಕೆ ನೀಡಿದೆ. ಚುನಾವಣಾ ಆಯೋಗ ವೀಕ್ಷಕ ಅತುಲ್ ಪಾಂಡೆ ಕ್ಷೇತ್ರದ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು, ಚುನಾವಣಾ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.
ಪ್ರತಿಯೊಬ್ಬ ಅಭ್ಯರ್ಥಿಗಳ ವೆಚ್ಚಗಳ ಮೇಲೆ ಹದ್ದಿನ ಕಣ್ಣಿಡಲು ನೀತಿ ಸಂಹಿತೆ ಜಾರಿ ತಂಡಗಳಿಗೆ ಸೂಚಿಸಿದರು. ಈ ವೇಳೆ ಚುನಾವಣಾ ಸಿದ್ಧತೆ, ರಾಜಕೀಯ ಪಕ್ಷಗಳ ಮತ್ತು ಅಭ್ಯರ್ಥಿಗಳ ವೆಚ್ಚದ ಲೆಕ್ಕ ಪರಿಶೀಲನೆ ಸಂಬಂಧವಾಗಿ ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಮೋಹನಕುಮಾರಿ ಮಾಹಿತಿ ನೀಡಿದರು.
36 ಪ್ರಕರಣ, 28 ಲಕ್ಷ ಹಣ ಜಪ್ತಿ:
ನೀತಿ ಸಂಹಿತೆ ಜಾರಿಯಾದ ದಿನದಿಂದ ಇಲ್ಲಿಯವರೆಗೆ ತಾಲೂಕಿನಲ್ಲಿ ಒಟ್ಟು 36 ಪ್ರಕರಣಗಳು ದಾಖಲಾಗಿದೆ. ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಒಟ್ಟು ರೂ.327500. ಮತ್ತು ಚುನಾವಣಾ ಸಾಮಗ್ರಿ, ಮದ್ಯ ಇತ್ಯಾದಿಗಳ ಒಟ್ಟು ರೂ.24,80,749. ಮೊತ್ತದ ಸಾಮಗ್ರಿ ವಶಕ್ಕೆ ಪಡೆಯಲಾಗಿದೆ ಎಂದು ಎಂ.ಸಿ.ಸಿ ನೋಡಲ್ ಅಧಿಕಾರಿ ಶ್ರೀನಾಥಗೌಡ ಮಾಹಿತಿ ನೀಡಿದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…