ಸ್ವಾಭಿಮಾನಿ ಶಿಕ್ಷಕರು ಈ ಬಾರಿ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಅತಿ ಹೆಚ್ಚು ಮತ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಜೆಡಿಎಸ್ ಪಕ್ಷದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಎಂಎಲ್ಸಿ ಆಕಾಂಕ್ಷಿ ಎ.ಪಿ.ರಂಗನಾಥ್ ತಿಳಿಸಿದರು.
ನಗರದ ಐತಿಹಾಸಿಕ ಕಟ್ಟೆ ಅಶ್ವತ್ಥ ಗಣೇಶ ದೇವಾಲಯದಲ್ಲಿ ಜೆಡಿಎಸ್ನ ಎಂಎಲ್ಸಿ ಆಕಾಂಕ್ಷಿಯಾಗಿರುವ ಎ.ಪಿ.ರಂಗನಾಥ್ ಅವರು ಜೆಡಿಎಸ್ ಮುಖಂಡರು, ಬೆಂಬಲಿತ ಶಿಕ್ಷಕರೊಂದಿಗೆ ಆಗಮಿಸಿ ಶುಕ್ರವಾರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸರ್ಕಾರಿ ಸ್ವಾಮ್ಯದಲ್ಲಿರುವ ಅನುದಾನಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಪಿಂಚಣಿ ಸೌಲಭ್ಯವಿಲ್ಲ. ಅವರ ಪರವಾಗಿ ವಿಧಾನ ಮಂಡಲದಲ್ಲಿ ಗಟ್ಟಿಯಾಗಿ ಧ್ವನಿ ಎತ್ತುವ ಅಭ್ಯರ್ಥಿಯ ಅಗತ್ಯವಿದೆ. ಶಿಕ್ಷಕರ ಪ್ರತಿಯೊಂದು ಸಮಸ್ಯೆಗಳಿಗೆ ಸ್ಪಂದಿಸುವೆ ಹೀಗಾಗಿ ಈ ಬಾರಿ ಹೆಚ್ಚಿನ ಮತಗಳನ್ನು ನೀಡಿ ಜಯಶೀಲರನ್ನಾಗಿ ಮಾಡಿ ಎಂದು ಕೊರಿದರು.
ಜೆಡಿಎಸ್ ಮುಖಂಡರಾದ ಸತ್ಯನಾರಾಯಣ, ಕೆಂಪರಾಜು ಮಾತನಾಡಿ ಎ.ಪಿ ರಂಗನಾಥ ಅವರು ವೃತ್ತಿಯಲ್ಲಿ ವಕೀಲರಾಗಿದ್ದು, ಸುಶಿಕ್ಷಿತರಾಗಿದ್ದಾರೆ. ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿರುವುದರಿಂದ ಇವರು ಅತ್ಯಂತ ಹೆಚ್ಚು ಸೂಕ್ತವಾಗಿದ್ದಾರೆ. ವಿಧಾನಪರಿಷತ್ ಪ್ರತಿನಿಧಿಸುವ ಎಲ್ಲಾ ಅರ್ಹತೆಗಳನ್ನು ಹೊಂದಿದ್ದಾರೆ. ಭ್ರಷ್ಟಾಚಾರ ರಹಿತವಾಗಿ ಶಿಕ್ಷಕರು ಮತ್ತು ಶಿಕ್ಷಣ ವ್ಯವಸ್ಥೆಗೆ ಹೋರಾಡುವ ಮನೋಭಾವ ಹೊಂದಿರುವ ಅಭ್ಯರ್ಥಿಗೆ ಈ ಬಾರಿ ಅವಕಾಶ ಮಾಡಿಕೊಡಿ ಎಂದರು. ಜೆಡಿಎಸ್ ನಾಯಕರಾದ ಹೆಚ್.ಡಿ ದೇವೇಗೌಡ ಮತ್ತು ಹೆಚ್.ಡಿ ಕುಮಾರಸ್ವಾಮಿಯವರ ಮಾರ್ಗದರ್ಶನದಲ್ಲಿ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ನಗರದ ದೇವಲಮಹರ್ಷಿ ಶಾಲೆ, ಜಾಲಪ್ಪ ಕಾಲೇಜು, ಜಿ.ಕೆ ಇಂಗ್ಲಿಷ್ ಮಾಧ್ಯಮ ಶಾಲೆ, ಅರಳುಮಲ್ಲಿಗೆ ಸರ್ಕಾರಿ ಪ್ರೌಢಶಾಲೆ, ನಿವೇದಿತಾ ಆಂಗ್ಲ ಶಾಲೆ ಸೇರಿದಂತೆ ವಿವಿಧ ಶಾಲಾ – ಕಾಲೇಜುಗಳಿಗೆ ತೆರಳಿ ಶಿಕ್ಷಕರ ಮತಯಾಚನೆ ಮಾಡಿದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…