ಸ್ವಾಭಿಮಾನಿ ಶಿಕ್ಷಕರು ಈ ಬಾರಿ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಅತಿ ಹೆಚ್ಚು ಮತ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಜೆಡಿಎಸ್ ಪಕ್ಷದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಎಂಎಲ್ಸಿ ಆಕಾಂಕ್ಷಿ ಎ.ಪಿ.ರಂಗನಾಥ್ ತಿಳಿಸಿದರು.
ನಗರದ ಐತಿಹಾಸಿಕ ಕಟ್ಟೆ ಅಶ್ವತ್ಥ ಗಣೇಶ ದೇವಾಲಯದಲ್ಲಿ ಜೆಡಿಎಸ್ನ ಎಂಎಲ್ಸಿ ಆಕಾಂಕ್ಷಿಯಾಗಿರುವ ಎ.ಪಿ.ರಂಗನಾಥ್ ಅವರು ಜೆಡಿಎಸ್ ಮುಖಂಡರು, ಬೆಂಬಲಿತ ಶಿಕ್ಷಕರೊಂದಿಗೆ ಆಗಮಿಸಿ ಶುಕ್ರವಾರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸರ್ಕಾರಿ ಸ್ವಾಮ್ಯದಲ್ಲಿರುವ ಅನುದಾನಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಪಿಂಚಣಿ ಸೌಲಭ್ಯವಿಲ್ಲ. ಅವರ ಪರವಾಗಿ ವಿಧಾನ ಮಂಡಲದಲ್ಲಿ ಗಟ್ಟಿಯಾಗಿ ಧ್ವನಿ ಎತ್ತುವ ಅಭ್ಯರ್ಥಿಯ ಅಗತ್ಯವಿದೆ. ಶಿಕ್ಷಕರ ಪ್ರತಿಯೊಂದು ಸಮಸ್ಯೆಗಳಿಗೆ ಸ್ಪಂದಿಸುವೆ ಹೀಗಾಗಿ ಈ ಬಾರಿ ಹೆಚ್ಚಿನ ಮತಗಳನ್ನು ನೀಡಿ ಜಯಶೀಲರನ್ನಾಗಿ ಮಾಡಿ ಎಂದು ಕೊರಿದರು.
ಜೆಡಿಎಸ್ ಮುಖಂಡರಾದ ಸತ್ಯನಾರಾಯಣ, ಕೆಂಪರಾಜು ಮಾತನಾಡಿ ಎ.ಪಿ ರಂಗನಾಥ ಅವರು ವೃತ್ತಿಯಲ್ಲಿ ವಕೀಲರಾಗಿದ್ದು, ಸುಶಿಕ್ಷಿತರಾಗಿದ್ದಾರೆ. ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿರುವುದರಿಂದ ಇವರು ಅತ್ಯಂತ ಹೆಚ್ಚು ಸೂಕ್ತವಾಗಿದ್ದಾರೆ. ವಿಧಾನಪರಿಷತ್ ಪ್ರತಿನಿಧಿಸುವ ಎಲ್ಲಾ ಅರ್ಹತೆಗಳನ್ನು ಹೊಂದಿದ್ದಾರೆ. ಭ್ರಷ್ಟಾಚಾರ ರಹಿತವಾಗಿ ಶಿಕ್ಷಕರು ಮತ್ತು ಶಿಕ್ಷಣ ವ್ಯವಸ್ಥೆಗೆ ಹೋರಾಡುವ ಮನೋಭಾವ ಹೊಂದಿರುವ ಅಭ್ಯರ್ಥಿಗೆ ಈ ಬಾರಿ ಅವಕಾಶ ಮಾಡಿಕೊಡಿ ಎಂದರು. ಜೆಡಿಎಸ್ ನಾಯಕರಾದ ಹೆಚ್.ಡಿ ದೇವೇಗೌಡ ಮತ್ತು ಹೆಚ್.ಡಿ ಕುಮಾರಸ್ವಾಮಿಯವರ ಮಾರ್ಗದರ್ಶನದಲ್ಲಿ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ನಗರದ ದೇವಲಮಹರ್ಷಿ ಶಾಲೆ, ಜಾಲಪ್ಪ ಕಾಲೇಜು, ಜಿ.ಕೆ ಇಂಗ್ಲಿಷ್ ಮಾಧ್ಯಮ ಶಾಲೆ, ಅರಳುಮಲ್ಲಿಗೆ ಸರ್ಕಾರಿ ಪ್ರೌಢಶಾಲೆ, ನಿವೇದಿತಾ ಆಂಗ್ಲ ಶಾಲೆ ಸೇರಿದಂತೆ ವಿವಿಧ ಶಾಲಾ – ಕಾಲೇಜುಗಳಿಗೆ ತೆರಳಿ ಶಿಕ್ಷಕರ ಮತಯಾಚನೆ ಮಾಡಿದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…