ಸ್ವಾಭಿಮಾನಿ ಶಿಕ್ಷಕರು ಈ ಬಾರಿ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಅತಿ ಹೆಚ್ಚು ಮತ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಜೆಡಿಎಸ್ ಪಕ್ಷದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಎಂಎಲ್ಸಿ ಆಕಾಂಕ್ಷಿ ಎ.ಪಿ.ರಂಗನಾಥ್ ತಿಳಿಸಿದರು.
ನಗರದ ಐತಿಹಾಸಿಕ ಕಟ್ಟೆ ಅಶ್ವತ್ಥ ಗಣೇಶ ದೇವಾಲಯದಲ್ಲಿ ಜೆಡಿಎಸ್ನ ಎಂಎಲ್ಸಿ ಆಕಾಂಕ್ಷಿಯಾಗಿರುವ ಎ.ಪಿ.ರಂಗನಾಥ್ ಅವರು ಜೆಡಿಎಸ್ ಮುಖಂಡರು, ಬೆಂಬಲಿತ ಶಿಕ್ಷಕರೊಂದಿಗೆ ಆಗಮಿಸಿ ಶುಕ್ರವಾರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸರ್ಕಾರಿ ಸ್ವಾಮ್ಯದಲ್ಲಿರುವ ಅನುದಾನಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಪಿಂಚಣಿ ಸೌಲಭ್ಯವಿಲ್ಲ. ಅವರ ಪರವಾಗಿ ವಿಧಾನ ಮಂಡಲದಲ್ಲಿ ಗಟ್ಟಿಯಾಗಿ ಧ್ವನಿ ಎತ್ತುವ ಅಭ್ಯರ್ಥಿಯ ಅಗತ್ಯವಿದೆ. ಶಿಕ್ಷಕರ ಪ್ರತಿಯೊಂದು ಸಮಸ್ಯೆಗಳಿಗೆ ಸ್ಪಂದಿಸುವೆ ಹೀಗಾಗಿ ಈ ಬಾರಿ ಹೆಚ್ಚಿನ ಮತಗಳನ್ನು ನೀಡಿ ಜಯಶೀಲರನ್ನಾಗಿ ಮಾಡಿ ಎಂದು ಕೊರಿದರು.
ಜೆಡಿಎಸ್ ಮುಖಂಡರಾದ ಸತ್ಯನಾರಾಯಣ, ಕೆಂಪರಾಜು ಮಾತನಾಡಿ ಎ.ಪಿ ರಂಗನಾಥ ಅವರು ವೃತ್ತಿಯಲ್ಲಿ ವಕೀಲರಾಗಿದ್ದು, ಸುಶಿಕ್ಷಿತರಾಗಿದ್ದಾರೆ. ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿರುವುದರಿಂದ ಇವರು ಅತ್ಯಂತ ಹೆಚ್ಚು ಸೂಕ್ತವಾಗಿದ್ದಾರೆ. ವಿಧಾನಪರಿಷತ್ ಪ್ರತಿನಿಧಿಸುವ ಎಲ್ಲಾ ಅರ್ಹತೆಗಳನ್ನು ಹೊಂದಿದ್ದಾರೆ. ಭ್ರಷ್ಟಾಚಾರ ರಹಿತವಾಗಿ ಶಿಕ್ಷಕರು ಮತ್ತು ಶಿಕ್ಷಣ ವ್ಯವಸ್ಥೆಗೆ ಹೋರಾಡುವ ಮನೋಭಾವ ಹೊಂದಿರುವ ಅಭ್ಯರ್ಥಿಗೆ ಈ ಬಾರಿ ಅವಕಾಶ ಮಾಡಿಕೊಡಿ ಎಂದರು. ಜೆಡಿಎಸ್ ನಾಯಕರಾದ ಹೆಚ್.ಡಿ ದೇವೇಗೌಡ ಮತ್ತು ಹೆಚ್.ಡಿ ಕುಮಾರಸ್ವಾಮಿಯವರ ಮಾರ್ಗದರ್ಶನದಲ್ಲಿ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ನಗರದ ದೇವಲಮಹರ್ಷಿ ಶಾಲೆ, ಜಾಲಪ್ಪ ಕಾಲೇಜು, ಜಿ.ಕೆ ಇಂಗ್ಲಿಷ್ ಮಾಧ್ಯಮ ಶಾಲೆ, ಅರಳುಮಲ್ಲಿಗೆ ಸರ್ಕಾರಿ ಪ್ರೌಢಶಾಲೆ, ನಿವೇದಿತಾ ಆಂಗ್ಲ ಶಾಲೆ ಸೇರಿದಂತೆ ವಿವಿಧ ಶಾಲಾ – ಕಾಲೇಜುಗಳಿಗೆ ತೆರಳಿ ಶಿಕ್ಷಕರ ಮತಯಾಚನೆ ಮಾಡಿದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…