ಸ್ವಾಭಿಮಾನಿ ಶಿಕ್ಷಕರು ಈ ಬಾರಿ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಅತಿ ಹೆಚ್ಚು ಮತ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಜೆಡಿಎಸ್ ಪಕ್ಷದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಎಂಎಲ್ಸಿ ಆಕಾಂಕ್ಷಿ ಎ.ಪಿ.ರಂಗನಾಥ್ ತಿಳಿಸಿದರು.
ನಗರದ ಐತಿಹಾಸಿಕ ಕಟ್ಟೆ ಅಶ್ವತ್ಥ ಗಣೇಶ ದೇವಾಲಯದಲ್ಲಿ ಜೆಡಿಎಸ್ನ ಎಂಎಲ್ಸಿ ಆಕಾಂಕ್ಷಿಯಾಗಿರುವ ಎ.ಪಿ.ರಂಗನಾಥ್ ಅವರು ಜೆಡಿಎಸ್ ಮುಖಂಡರು, ಬೆಂಬಲಿತ ಶಿಕ್ಷಕರೊಂದಿಗೆ ಆಗಮಿಸಿ ಶುಕ್ರವಾರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸರ್ಕಾರಿ ಸ್ವಾಮ್ಯದಲ್ಲಿರುವ ಅನುದಾನಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಪಿಂಚಣಿ ಸೌಲಭ್ಯವಿಲ್ಲ. ಅವರ ಪರವಾಗಿ ವಿಧಾನ ಮಂಡಲದಲ್ಲಿ ಗಟ್ಟಿಯಾಗಿ ಧ್ವನಿ ಎತ್ತುವ ಅಭ್ಯರ್ಥಿಯ ಅಗತ್ಯವಿದೆ. ಶಿಕ್ಷಕರ ಪ್ರತಿಯೊಂದು ಸಮಸ್ಯೆಗಳಿಗೆ ಸ್ಪಂದಿಸುವೆ ಹೀಗಾಗಿ ಈ ಬಾರಿ ಹೆಚ್ಚಿನ ಮತಗಳನ್ನು ನೀಡಿ ಜಯಶೀಲರನ್ನಾಗಿ ಮಾಡಿ ಎಂದು ಕೊರಿದರು.
ಜೆಡಿಎಸ್ ಮುಖಂಡರಾದ ಸತ್ಯನಾರಾಯಣ, ಕೆಂಪರಾಜು ಮಾತನಾಡಿ ಎ.ಪಿ ರಂಗನಾಥ ಅವರು ವೃತ್ತಿಯಲ್ಲಿ ವಕೀಲರಾಗಿದ್ದು, ಸುಶಿಕ್ಷಿತರಾಗಿದ್ದಾರೆ. ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿರುವುದರಿಂದ ಇವರು ಅತ್ಯಂತ ಹೆಚ್ಚು ಸೂಕ್ತವಾಗಿದ್ದಾರೆ. ವಿಧಾನಪರಿಷತ್ ಪ್ರತಿನಿಧಿಸುವ ಎಲ್ಲಾ ಅರ್ಹತೆಗಳನ್ನು ಹೊಂದಿದ್ದಾರೆ. ಭ್ರಷ್ಟಾಚಾರ ರಹಿತವಾಗಿ ಶಿಕ್ಷಕರು ಮತ್ತು ಶಿಕ್ಷಣ ವ್ಯವಸ್ಥೆಗೆ ಹೋರಾಡುವ ಮನೋಭಾವ ಹೊಂದಿರುವ ಅಭ್ಯರ್ಥಿಗೆ ಈ ಬಾರಿ ಅವಕಾಶ ಮಾಡಿಕೊಡಿ ಎಂದರು. ಜೆಡಿಎಸ್ ನಾಯಕರಾದ ಹೆಚ್.ಡಿ ದೇವೇಗೌಡ ಮತ್ತು ಹೆಚ್.ಡಿ ಕುಮಾರಸ್ವಾಮಿಯವರ ಮಾರ್ಗದರ್ಶನದಲ್ಲಿ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ನಗರದ ದೇವಲಮಹರ್ಷಿ ಶಾಲೆ, ಜಾಲಪ್ಪ ಕಾಲೇಜು, ಜಿ.ಕೆ ಇಂಗ್ಲಿಷ್ ಮಾಧ್ಯಮ ಶಾಲೆ, ಅರಳುಮಲ್ಲಿಗೆ ಸರ್ಕಾರಿ ಪ್ರೌಢಶಾಲೆ, ನಿವೇದಿತಾ ಆಂಗ್ಲ ಶಾಲೆ ಸೇರಿದಂತೆ ವಿವಿಧ ಶಾಲಾ – ಕಾಲೇಜುಗಳಿಗೆ ತೆರಳಿ ಶಿಕ್ಷಕರ ಮತಯಾಚನೆ ಮಾಡಿದರು.
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…