ರಾಜಕೀಯ ಪ್ರೇರಿತ ಕ್ರಿಕೆಟ್ ಟೂರ್ನಮೆಂಟ್ ಗಳನ್ನು ನಿರ್ಬಂಧಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ.
ಫೆ.17 ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಕ್ರಿಕೆಟ್ ಪಂದ್ಯಾವಳಿ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿ ಭರತ್ ಮತ್ತು ಪ್ರತೀಕ್ ಎಂಬ ಇಬ್ಬರು ಅಮಾಯಕ ಯುವಕರ ಕೊಲೆಗೆ ಕಾರಣವಾಗಿತ್ತು. ಈ ಹಿನ್ನೆಲೆ ರಾಜಕೀಯ ಪ್ರೇರಿತ ಕ್ರಿಕೆಟ್ ಟೂರ್ನಮೆಂಟ್ ಗಳನ್ನು ನಿರ್ಬಂಧಿಸಲಾಗಿದೆ.
2023ರ ವಿಧಾನಸಭಾ ಚುನಾವಣೆ ಮುಗಿಯುವವರೆಗೂ ರಾಜಕೀಯ ಪ್ರೇರಿತ ಕ್ರಿಕೆಟ್ ಟೂರ್ನಮೆಂಟ್ ಗಳನ್ನು ನಡೆಸದಂತೆ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳಬೇಕು ಹಾಗೂ ಒಂದು ವೇಳೆ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜನೆ ಮಾಡಿದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ಸೂಚಿಸಿದ್ದಾರೆ.
ವಿಧಾನಸಭಾ ಚುನಾವಣೆ ಮುಗಿಯುವವರೆಗೂ ಸರ್ಕಾರ ನಡೆಸುವ ಕ್ರೀಡೆಗಳನ್ನು ಹೊರತು ಪಡಿಸಿ ಯಾವುದೇ ಖಾಸಗಿ ವ್ಯಕ್ತಿ, ಸಂಸ್ಥೆಗಳು ಆಯೋಜನೆ ಮಾಡುವ ಯಾವುದೇ ಕ್ರೀಡೆಗಳಿಗೂ ಅವಕಾಶ ನೀಡದಂತೆ ಮಲ್ಲಿಕಾರ್ಜುನ ಬಾಲದಂಡಿ ಅವರು ಮೌಕಿಕ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಹಂತದ ಪೊಲೀಸ್ ಅಧಿಕಾರಿಗಳಿಗೆ ಆದೇಶದ ಮೂಲಕ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…