ರಾಜಕೀಯ ಪ್ರೇರಿತ ಕ್ರಿಕೆಟ್ ಟೂರ್ನಮೆಂಟ್ ಗಳನ್ನು ನಿರ್ಬಂಧಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ.
ಫೆ.17 ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಕ್ರಿಕೆಟ್ ಪಂದ್ಯಾವಳಿ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿ ಭರತ್ ಮತ್ತು ಪ್ರತೀಕ್ ಎಂಬ ಇಬ್ಬರು ಅಮಾಯಕ ಯುವಕರ ಕೊಲೆಗೆ ಕಾರಣವಾಗಿತ್ತು. ಈ ಹಿನ್ನೆಲೆ ರಾಜಕೀಯ ಪ್ರೇರಿತ ಕ್ರಿಕೆಟ್ ಟೂರ್ನಮೆಂಟ್ ಗಳನ್ನು ನಿರ್ಬಂಧಿಸಲಾಗಿದೆ.
2023ರ ವಿಧಾನಸಭಾ ಚುನಾವಣೆ ಮುಗಿಯುವವರೆಗೂ ರಾಜಕೀಯ ಪ್ರೇರಿತ ಕ್ರಿಕೆಟ್ ಟೂರ್ನಮೆಂಟ್ ಗಳನ್ನು ನಡೆಸದಂತೆ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳಬೇಕು ಹಾಗೂ ಒಂದು ವೇಳೆ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜನೆ ಮಾಡಿದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ಸೂಚಿಸಿದ್ದಾರೆ.
ವಿಧಾನಸಭಾ ಚುನಾವಣೆ ಮುಗಿಯುವವರೆಗೂ ಸರ್ಕಾರ ನಡೆಸುವ ಕ್ರೀಡೆಗಳನ್ನು ಹೊರತು ಪಡಿಸಿ ಯಾವುದೇ ಖಾಸಗಿ ವ್ಯಕ್ತಿ, ಸಂಸ್ಥೆಗಳು ಆಯೋಜನೆ ಮಾಡುವ ಯಾವುದೇ ಕ್ರೀಡೆಗಳಿಗೂ ಅವಕಾಶ ನೀಡದಂತೆ ಮಲ್ಲಿಕಾರ್ಜುನ ಬಾಲದಂಡಿ ಅವರು ಮೌಕಿಕ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಹಂತದ ಪೊಲೀಸ್ ಅಧಿಕಾರಿಗಳಿಗೆ ಆದೇಶದ ಮೂಲಕ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…