ರಾಜಕೀಯ ಪ್ರೇರಿತ ಕ್ರಿಕೆಟ್ ಟೂರ್ನಮೆಂಟ್ ಗಳನ್ನು ನಿರ್ಬಂಧಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ.
ಫೆ.17 ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಕ್ರಿಕೆಟ್ ಪಂದ್ಯಾವಳಿ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿ ಭರತ್ ಮತ್ತು ಪ್ರತೀಕ್ ಎಂಬ ಇಬ್ಬರು ಅಮಾಯಕ ಯುವಕರ ಕೊಲೆಗೆ ಕಾರಣವಾಗಿತ್ತು. ಈ ಹಿನ್ನೆಲೆ ರಾಜಕೀಯ ಪ್ರೇರಿತ ಕ್ರಿಕೆಟ್ ಟೂರ್ನಮೆಂಟ್ ಗಳನ್ನು ನಿರ್ಬಂಧಿಸಲಾಗಿದೆ.
2023ರ ವಿಧಾನಸಭಾ ಚುನಾವಣೆ ಮುಗಿಯುವವರೆಗೂ ರಾಜಕೀಯ ಪ್ರೇರಿತ ಕ್ರಿಕೆಟ್ ಟೂರ್ನಮೆಂಟ್ ಗಳನ್ನು ನಡೆಸದಂತೆ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳಬೇಕು ಹಾಗೂ ಒಂದು ವೇಳೆ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜನೆ ಮಾಡಿದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ಸೂಚಿಸಿದ್ದಾರೆ.
ವಿಧಾನಸಭಾ ಚುನಾವಣೆ ಮುಗಿಯುವವರೆಗೂ ಸರ್ಕಾರ ನಡೆಸುವ ಕ್ರೀಡೆಗಳನ್ನು ಹೊರತು ಪಡಿಸಿ ಯಾವುದೇ ಖಾಸಗಿ ವ್ಯಕ್ತಿ, ಸಂಸ್ಥೆಗಳು ಆಯೋಜನೆ ಮಾಡುವ ಯಾವುದೇ ಕ್ರೀಡೆಗಳಿಗೂ ಅವಕಾಶ ನೀಡದಂತೆ ಮಲ್ಲಿಕಾರ್ಜುನ ಬಾಲದಂಡಿ ಅವರು ಮೌಕಿಕ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಹಂತದ ಪೊಲೀಸ್ ಅಧಿಕಾರಿಗಳಿಗೆ ಆದೇಶದ ಮೂಲಕ ತಿಳಿಸಿದ್ದಾರೆ.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…